ಮೈಸೂರು: ಮುಡಾ ಹಗರಣದಲ್ಲಿ ಇ.ಡಿ.ಅಧಿಕಾರಿಗಳು 300 ಕೋಟಿ ಆಸ್ತಿ ಜಪ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರಲ್ಲಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕಪ್ಪುಚುಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು(ಜನವರಿ.19) ಕುಂಭಮೇಳದ ಬಗ್ಗೆ ಸುದ್ದಿಗೋಷ್ಠಿ ಏರ್ಪಡಿಸಿದ್ದ ವೇಳೆ ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಲ್ಲಿ ನಿವೇಶನಗಳು ಹಂಚಿಕೆಯಾಗಿರುವುದು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಬಿಜೆಪಿ ನೇಮಕ ಮಾಡಿರುವ ಅಧಿಕಾರಿಗಳಿಂದಲೇ ಸೈಟ್ ಹಂಚಿಕೆಯಾಗಿದೆ. ಹೀಗಾಗಿ ಈ ಬಗ್ಗೆಯೂ ಇ.ಡಿ.ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನೂ ಇ.ಡಿ. ತನಿಖಾ ಸಂಸ್ಥೆಯೂ ವಶಪಡಿಸಿಕೊಂಡಿದ್ದ ಮುಡಾದ 142 ನಿವೇಶನಗಳಿಗೂ, ಮುಡಾ ಪ್ರಕರಣದ 14 ನಿವೇಶನಗಳಿಗೂ ಸಂಬಂಧವಿಲ್ಲ. ನಾವು ಕಾನೂನಾತ್ಮಕವಾಗಿಯೇ ನಿವೇಶನಗಳನ್ನು ಪಡೆದಿದ್ದೇವೆ. ಆದರೆ ಇ.ಡಿ. ತನಿಖಾ ಸಂಸ್ಥೆಯವರು ಮೀಸ್ ಲೀಡ್ ಆಗಿ ಟ್ವೀಟ್ ಮಾಡಿದ್ದಾರೆ. ಅವರು ನಡೆಸಿರುವ ತನಿಖೆಯೇ ಬೇರೆ, ಅದರಲ್ಲಿ 14 ನಿವೇಶನಗಳ ಬಗ್ಗೆ ಉಲ್ಲೇಖವಿಲ್ಲ. ಆದರೂ ಅನಗತ್ಯವಾಗಿ ಸಿಎಂ ಅವರ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪುಚುಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಮುಡಾ ಹಗರಣದ ಬಗ್ಗೆ ಲೀಗಲ್ ಟೀಂ ಎಲ್ಲವನ್ನೂ ಪರಿಶೀಲನೆ ಮಾಡುತ್ತಿದೆ. ಈ ವಿಚಾರ ಸರ್ಕಾರದ ಇಮೇಜ್ಗೆ ಮಸಿ ಬಳಿಯುವ ಯತ್ನವಾಗಿದೆ. ಈ ಬಗ್ಗೆ ನಾವು ಕಾನೂನುಬದ್ಧವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…