ಮೈಸೂರು: ನೂತನ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಜನತೆ ಎಲ್ಲಾ ಸಿದ್ಧತೆ ಕೈಗೊಂಡಿದ್ದಾರೆ.
ಹೊಸ ವರ್ಷ 2025ರ ಮೊದಲ ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡು ಲಕ್ಷ ಲಾಡುಗಳ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೂತನ ವರ್ಷದ ಮೊದಲ ದಿನ ಎರಡು ಲಕ್ಷ ಲಾಡುಗಳನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕನ್ನಡದ ಮೇರುನಟ ಡಾ.ರಾಜ್ ಕುಮಾರ್ ಅವರ ಪ್ರೇರಣೆಯಿಂದ ಕಳೆದ 1994ರಲ್ಲಿ ಒಂದು ಸಾವಿರ ಲಾಡುಗಳ ವಿತರಣೆಯೊಂದಿಗೆ ಆರಂಭವಾದ ಸೇವೆ, ವರ್ಷದಿಂದ ವರ್ಷಕ್ಕೆ ಲಾಡುಗಳ ವಿತರಣೆಯಲ್ಲಿ ಹೆಚ್ಚಳವಾಗುತ್ತಿದೆ.
ನೂತನ ವರ್ಷದ ಮೊದಲ ದಿನ ದೇವಾಲಯಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ವಿತರಿಸಲು ತಿರುಪತಿ ಮಾದರಿಯಲ್ಲಿ ಲಡ್ಡುಗಳನ್ನು ತಯಾರಿ ಮಾಡಲಾಗಿದೆ.
ಸುಮಾರು 100 ಮಂದಿ ನುರಿತ ಬಾಣಸಿಗರು ಲಡ್ಡುಗಳನ್ನು ತಯಾರಿ ಮಾಡಿದ್ದು, 200 ಕ್ವಿಂಟಾಲ್ ಸಕ್ಕರೆ, ಕಡಲೆಹಿಟ್ಟು, ಬಾದಾಮಿ, ಪಿಸ್ತಾ, ಏಲಕ್ಕಿ, ದ್ರಾಕ್ಷಿ, ಗೋಡಂಬಿ, ತುಪ್ಪ, ಪಚ್ಚ ಕರ್ಪೂರ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಮಿಶ್ರಣ ಮಾಡಿ ಲಡ್ಡು ತಯಾರಿ ಮಾಡಲಾಗಿದೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…