ಮೈಸೂರು: ನೂತನ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಜನತೆ ಎಲ್ಲಾ ಸಿದ್ಧತೆ ಕೈಗೊಂಡಿದ್ದಾರೆ.
ಹೊಸ ವರ್ಷ 2025ರ ಮೊದಲ ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡು ಲಕ್ಷ ಲಾಡುಗಳ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೂತನ ವರ್ಷದ ಮೊದಲ ದಿನ ಎರಡು ಲಕ್ಷ ಲಾಡುಗಳನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕನ್ನಡದ ಮೇರುನಟ ಡಾ.ರಾಜ್ ಕುಮಾರ್ ಅವರ ಪ್ರೇರಣೆಯಿಂದ ಕಳೆದ 1994ರಲ್ಲಿ ಒಂದು ಸಾವಿರ ಲಾಡುಗಳ ವಿತರಣೆಯೊಂದಿಗೆ ಆರಂಭವಾದ ಸೇವೆ, ವರ್ಷದಿಂದ ವರ್ಷಕ್ಕೆ ಲಾಡುಗಳ ವಿತರಣೆಯಲ್ಲಿ ಹೆಚ್ಚಳವಾಗುತ್ತಿದೆ.
ನೂತನ ವರ್ಷದ ಮೊದಲ ದಿನ ದೇವಾಲಯಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ವಿತರಿಸಲು ತಿರುಪತಿ ಮಾದರಿಯಲ್ಲಿ ಲಡ್ಡುಗಳನ್ನು ತಯಾರಿ ಮಾಡಲಾಗಿದೆ.
ಸುಮಾರು 100 ಮಂದಿ ನುರಿತ ಬಾಣಸಿಗರು ಲಡ್ಡುಗಳನ್ನು ತಯಾರಿ ಮಾಡಿದ್ದು, 200 ಕ್ವಿಂಟಾಲ್ ಸಕ್ಕರೆ, ಕಡಲೆಹಿಟ್ಟು, ಬಾದಾಮಿ, ಪಿಸ್ತಾ, ಏಲಕ್ಕಿ, ದ್ರಾಕ್ಷಿ, ಗೋಡಂಬಿ, ತುಪ್ಪ, ಪಚ್ಚ ಕರ್ಪೂರ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಮಿಶ್ರಣ ಮಾಡಿ ಲಡ್ಡು ತಯಾರಿ ಮಾಡಲಾಗಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…