ಮೈಸೂರು: ನೂತನ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಜನತೆ ಎಲ್ಲಾ ಸಿದ್ಧತೆ ಕೈಗೊಂಡಿದ್ದಾರೆ.
ಹೊಸ ವರ್ಷ 2025ರ ಮೊದಲ ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡು ಲಕ್ಷ ಲಾಡುಗಳ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೂತನ ವರ್ಷದ ಮೊದಲ ದಿನ ಎರಡು ಲಕ್ಷ ಲಾಡುಗಳನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕನ್ನಡದ ಮೇರುನಟ ಡಾ.ರಾಜ್ ಕುಮಾರ್ ಅವರ ಪ್ರೇರಣೆಯಿಂದ ಕಳೆದ 1994ರಲ್ಲಿ ಒಂದು ಸಾವಿರ ಲಾಡುಗಳ ವಿತರಣೆಯೊಂದಿಗೆ ಆರಂಭವಾದ ಸೇವೆ, ವರ್ಷದಿಂದ ವರ್ಷಕ್ಕೆ ಲಾಡುಗಳ ವಿತರಣೆಯಲ್ಲಿ ಹೆಚ್ಚಳವಾಗುತ್ತಿದೆ.
ನೂತನ ವರ್ಷದ ಮೊದಲ ದಿನ ದೇವಾಲಯಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ವಿತರಿಸಲು ತಿರುಪತಿ ಮಾದರಿಯಲ್ಲಿ ಲಡ್ಡುಗಳನ್ನು ತಯಾರಿ ಮಾಡಲಾಗಿದೆ.
ಸುಮಾರು 100 ಮಂದಿ ನುರಿತ ಬಾಣಸಿಗರು ಲಡ್ಡುಗಳನ್ನು ತಯಾರಿ ಮಾಡಿದ್ದು, 200 ಕ್ವಿಂಟಾಲ್ ಸಕ್ಕರೆ, ಕಡಲೆಹಿಟ್ಟು, ಬಾದಾಮಿ, ಪಿಸ್ತಾ, ಏಲಕ್ಕಿ, ದ್ರಾಕ್ಷಿ, ಗೋಡಂಬಿ, ತುಪ್ಪ, ಪಚ್ಚ ಕರ್ಪೂರ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಮಿಶ್ರಣ ಮಾಡಿ ಲಡ್ಡು ತಯಾರಿ ಮಾಡಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…