mysuru blankets
ಮೈಸೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ವಿಪರೀತ ಚಳಿ ಇರುವ ಪರಿಣಾಮ ಚಾಮುಂಡೇಶ್ವರಿ ಬಳಗದ ಯುವಕರು ನಿರಾಶ್ರಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
ಮೈಸೂರು ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೆ.ಆರ್.ಆಸ್ಪತ್ರೆ ಸುತ್ತಮುತ್ತ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಬಡವರಿಗೆ ಉಚಿತವಾಗಿ ಹೊದಿಕೆ ವಿತರಿಸುವ ಮೂಲಕ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಅವರು ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಮೈಸೂರಿನಲ್ಲಿ ನಿರಾಶ್ರಿತರು, ಅಶಕ್ತರಲ್ಲಿ ಸ್ವಾಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ ಕಾರಣ ಕಷ್ಟದಲ್ಲಿದ್ದೇವೆ ಸಹಾಯ ಮಾಡಿ ಎಂದು ಅವರು ಸಂಘ ಸಂಸ್ಥೆಗಳಿಗೆ ಅಥವಾ ಸರ್ಕಾರಕ್ಕೆ ಅರ್ಜಿ ಹಾಕಲ್ಲ. ಸರ್ಕಾರದವರೂ ಕೂಡ ಎಲ್ಲವನ್ನು ಸರಿದಾರಿಗೆ ತರೋದಕ್ಕೂ ಆಗುವುದಿಲ್ಲ. ಸಮಾಜವನ್ನು ಸರಿಪಡಿಸಲು ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರ ಪಾತ್ರ ಬಹಳ ಮುಖ್ಯ. ಅಶಕ್ತರಿರುವ ಸ್ಥಳಕ್ಕೆ ಹೋಗಿ ಹೊದಿಕೆ ವಿತರಣೆ ಕಾರ್ಯಕ್ರಮ ನಡೆಯುವ ಮಾದರಿಯಲ್ಲೇ ಅವರಿಗೆ ಆರೋಗ್ಯ ತಪಾಸಣೆ ಮಾಡಿಸಲು ಶ್ರಮಿಸೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ರಮೇಶ್ ರಾಮಪ್ಪ, ಜಿ ರಾಘವೇಂದ್ರ, ದಿನೇಶ್, ಎಸ್.ಎನ್.ರಾಜೇಶ್, ರವಿಚಂದ್ರ, ಭೈರತಿ ಲಿಂಗರಾಜು, ಅಮಿತ್ ಹಾಗೂ ಇನ್ನಿತರರು ಹಾಜರಿದ್ದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…