mysuru blankets
ಮೈಸೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ವಿಪರೀತ ಚಳಿ ಇರುವ ಪರಿಣಾಮ ಚಾಮುಂಡೇಶ್ವರಿ ಬಳಗದ ಯುವಕರು ನಿರಾಶ್ರಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
ಮೈಸೂರು ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೆ.ಆರ್.ಆಸ್ಪತ್ರೆ ಸುತ್ತಮುತ್ತ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಬಡವರಿಗೆ ಉಚಿತವಾಗಿ ಹೊದಿಕೆ ವಿತರಿಸುವ ಮೂಲಕ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಅವರು ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಮೈಸೂರಿನಲ್ಲಿ ನಿರಾಶ್ರಿತರು, ಅಶಕ್ತರಲ್ಲಿ ಸ್ವಾಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ ಕಾರಣ ಕಷ್ಟದಲ್ಲಿದ್ದೇವೆ ಸಹಾಯ ಮಾಡಿ ಎಂದು ಅವರು ಸಂಘ ಸಂಸ್ಥೆಗಳಿಗೆ ಅಥವಾ ಸರ್ಕಾರಕ್ಕೆ ಅರ್ಜಿ ಹಾಕಲ್ಲ. ಸರ್ಕಾರದವರೂ ಕೂಡ ಎಲ್ಲವನ್ನು ಸರಿದಾರಿಗೆ ತರೋದಕ್ಕೂ ಆಗುವುದಿಲ್ಲ. ಸಮಾಜವನ್ನು ಸರಿಪಡಿಸಲು ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರ ಪಾತ್ರ ಬಹಳ ಮುಖ್ಯ. ಅಶಕ್ತರಿರುವ ಸ್ಥಳಕ್ಕೆ ಹೋಗಿ ಹೊದಿಕೆ ವಿತರಣೆ ಕಾರ್ಯಕ್ರಮ ನಡೆಯುವ ಮಾದರಿಯಲ್ಲೇ ಅವರಿಗೆ ಆರೋಗ್ಯ ತಪಾಸಣೆ ಮಾಡಿಸಲು ಶ್ರಮಿಸೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ರಮೇಶ್ ರಾಮಪ್ಪ, ಜಿ ರಾಘವೇಂದ್ರ, ದಿನೇಶ್, ಎಸ್.ಎನ್.ರಾಜೇಶ್, ರವಿಚಂದ್ರ, ಭೈರತಿ ಲಿಂಗರಾಜು, ಅಮಿತ್ ಹಾಗೂ ಇನ್ನಿತರರು ಹಾಜರಿದ್ದರು.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…