ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ದಸರಾ ಕಾರ್ಯಕ್ರಮದ ಸ್ಥಳ ಬದಲಾಗಿದೆ.
ಈ ಬೆನ್ನಲ್ಲೇ ಯುವ ದಸರಾ ವೀಕ್ಷಣೆಗೆ ಟಿಕೆಟ್ ನಿಗದಿಗೊಳಿಸಿರುವ ಬಗ್ಗೆ ಮಾಹಿತಿ ಹೊರ ಬಂದಿದೆ. ಯುವ ದಸರಾ ಕಾರ್ಯಕ್ರಮದ ವೇದಿಕೆ ಬಳಿ ವಿಶೇಷ ಐಷಾರಾಮಿ ಆಸನದ ವ್ಯವಸ್ಥೆ ಮಾಡಲು ಉದ್ದೇಶಿಸಿದ್ದು, ಇದಕ್ಕಾಗಿ 5000 ರೂಗಳ ಟಿಕೆಟ್ ನಿಗದಿ ಮಾಡಲಾಗಿದೆ ಎಂಬ ಮಾಹಿತಿ ಹೊರಬಂದಿದೆ.
ವಿಶೇಷವೆಂದರೆ ಈ ವರ್ಷದ ಯುವ ದಸರಾ ಕಾರ್ಯಕ್ರಮದಲ್ಲಿ ತಮಿಳು ಚಲನಚಿತ್ರರಂಗದ ಸಂಗೀತ ಮಾಂತ್ರಿಕ ಇಳಯರಾಜ ಹಾಗೂ ರೆಹಮಾನ್ ಅವರನ್ನು ಆಹ್ವಾನಿಸುವ ಸಂಬಂಧ ಮಾತುಕತೆ ನಡೆದಿದೆ ಎನ್ನಲಾಗಿದೆ.
ದುಬಾರಿ ಸಂಗೀತಗಾರರಾದ ಈ ಇಬ್ಬರನ್ನು ಯುವ ದಸರಾ ವೇದಿಕೆಯಲ್ಲಿ ಕಾರ್ಯಕ್ರಮ ನೀಡಲು ಆಹ್ವಾನಿಸುತ್ತಿರುವ ಕಾರಣ ಹೆಚ್ಚುವರಿ ಆರ್ಥಿಕ ಹೊರೆಯನ್ನು ಟಿಕೆಟ್ ಮಾರಾಟದ ಮೂಲಕ ಭರಿಸಲು ಜಿಲ್ಲಾಡಳಿತ ಉದ್ದೇಶಿಸಿದೆ ಎನ್ನಲಾಗಿದೆ.
ಇನ್ನು ಮಹಾರಾಜ ಕಾಲೇಜು ಮೈದಾನದಿಂದ ಮೈಸೂರು ಹೊರವಲಯದ ಉತ್ತನಹಳ್ಳಿ ದೇವಸ್ಥಾನದ ಹತ್ತಿರ ಸ್ಥಳ ಬದಲು ಮಾಡಲಾಗಿದೆ. ವಿಶಾಲ ಪ್ರದೇಶವಾಗಿರುವ ಸ್ಥಳದಲ್ಲಿ ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಲಾಗಿದ್ದು, ಈ ಬಾರಿ ಹೆಚ್ಚಿನ ಜನ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…