ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು 6 ವರ್ಷ 8 ತಿಂಗಳ ವಯಸ್ಸಿನ ಆಫ್ರಿಕಾ ಬೇಟೆ ಚೀತಾ ‘ಬ್ರೂಕ್’ ದಿಢೀರ್ ಮೆನಿಂಜಿಟಿಸ್ ರೋಗಕ್ಕೆ ತುತ್ತಾಗಿ ಶನಿವಾರ ಮುಂಜಾನೆ ಅಸು ನೀಗಿತು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದ ಆನ್ನೆ ವಾನ್ ಡೈಕ್ ಚೀತಾ ಕೇಂದ್ರದಿಂದ 2020ರ ಆಗಸ್ಟ್ 17 ರಂದು ಗಂಡು ಚೀತಾ ಬ್ರೂಕ್ ಅನ್ನು ಮೈಸೂರು ಮೃಗಾಲಯಕ್ಕೆ ತರಲಾಗಿತ್ತು.
ಇದನ್ನು ಓದಿ : ಸಿಲಿಂಡರ್ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ
ಅನಾರೋಗ್ಯದಿಂದ ಬಳಲುತ್ತಿದ್ದ ಚೀತಾ ಬ್ರೂಕ್ ಕಳೆದ ಮೂರು ದಿನಗಳಿಂದ ಆಹಾರವನ್ನು ಸಂಪೂರ್ಣವಾಗಿ ತ್ಯಜಿಸಿತ್ತು. ಮೃಗಾಲಯದ ಪಶುವೈದ್ಯಾಧಿಕಾರಿಗಳು ಬ್ರೂಕ್ಗೆ ಅಗತ್ಯ ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮರಣ ಹೊಂದಿತು. ಬ್ರೂಕ್ ಸಾವಿಗೆ ಮೃಗಾಲಯವು ತೀವ್ರ ವಿಷಾದ ವ್ಯಕ್ತಪಡಿಸುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…