ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕೇವಲ ನಾಲ್ಕು ದಿನಗಳು ಬಾಕಿಯಿದ್ದು, ಸ್ವಚ್ಛತೆಗೆಂದೇ ಸ್ವಚ್ಛತಾ ಕಾರ್ಮಿಕರು ಸನ್ನದ್ಧರಾಗಿದ್ದಾರೆ.
ಕಂಡ ಕಂಡಲ್ಲಿ ಸಿಗುವ ಕಸವನ್ನು ಹೆಕ್ಕಿ ತೆಗೆಯುವ ಮೂಲಕ ದಸರೆ ವೇಳೆ ಮೈಸೂರು ನಗರವನ್ನು ಕಸಮುಕ್ತವನ್ನಾಗಿಸಲು ಸ್ವಚ್ಛತಾ ಕಾರ್ಮಿಕರು ಹಗಲಿರುಳು ಶ್ರಮ ವಹಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರು ನಗರದ ಸ್ವಚ್ಛತೆಗೆ 500 ಮಂದಿ ಹೆಚ್ಚುವರಿ ಸ್ವಚ್ಛತಾ ಕಾರ್ಮಿಕರು ರಸ್ತೆಗಿಳಿಯಲಿದ್ದಾರೆ.
ಮೂರು ಪಾಳಿಯಲ್ಲಿ ಸತತ 15 ದಿನಗಳ ಕಾಲ ಮೈಸೂರು ನಗರದ ಸ್ವಚ್ಛತಾ ಕಾರ್ಯದಲ್ಲಿ ಕಾರ್ಮಿಕರು ಭಾಗವಹಿಸಲಿದ್ದಾರೆ.
ಈ ಮೂಲಕ ದಸರಾ ವೇಳೆಯಲ್ಲಿ ಬರೋಬ್ಬರಿ 2500 ಮಂದಿ ಪೌರ ಕಾರ್ಮಿಕರು ಮೈಸೂರು ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.
ಇನ್ನು ಸ್ವಚ್ಛತಾ ಕಾರ್ಯಕ್ಕೆ 60 ವಾಹನಗಳನ್ನು ನೀಡಲಾಗುತ್ತಿದ್ದು, ಇದರೊಂದಿಗೆ ರಿಂಗ್ ರಸ್ತೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ಕೆಂದೇ 9 ಜೆಸಿಬಿಗಳನ್ನು ಸಹ ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…