ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕೇವಲ ನಾಲ್ಕು ದಿನಗಳು ಬಾಕಿಯಿದ್ದು, ಸ್ವಚ್ಛತೆಗೆಂದೇ ಸ್ವಚ್ಛತಾ ಕಾರ್ಮಿಕರು ಸನ್ನದ್ಧರಾಗಿದ್ದಾರೆ.
ಕಂಡ ಕಂಡಲ್ಲಿ ಸಿಗುವ ಕಸವನ್ನು ಹೆಕ್ಕಿ ತೆಗೆಯುವ ಮೂಲಕ ದಸರೆ ವೇಳೆ ಮೈಸೂರು ನಗರವನ್ನು ಕಸಮುಕ್ತವನ್ನಾಗಿಸಲು ಸ್ವಚ್ಛತಾ ಕಾರ್ಮಿಕರು ಹಗಲಿರುಳು ಶ್ರಮ ವಹಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರು ನಗರದ ಸ್ವಚ್ಛತೆಗೆ 500 ಮಂದಿ ಹೆಚ್ಚುವರಿ ಸ್ವಚ್ಛತಾ ಕಾರ್ಮಿಕರು ರಸ್ತೆಗಿಳಿಯಲಿದ್ದಾರೆ.
ಮೂರು ಪಾಳಿಯಲ್ಲಿ ಸತತ 15 ದಿನಗಳ ಕಾಲ ಮೈಸೂರು ನಗರದ ಸ್ವಚ್ಛತಾ ಕಾರ್ಯದಲ್ಲಿ ಕಾರ್ಮಿಕರು ಭಾಗವಹಿಸಲಿದ್ದಾರೆ.
ಈ ಮೂಲಕ ದಸರಾ ವೇಳೆಯಲ್ಲಿ ಬರೋಬ್ಬರಿ 2500 ಮಂದಿ ಪೌರ ಕಾರ್ಮಿಕರು ಮೈಸೂರು ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.
ಇನ್ನು ಸ್ವಚ್ಛತಾ ಕಾರ್ಯಕ್ಕೆ 60 ವಾಹನಗಳನ್ನು ನೀಡಲಾಗುತ್ತಿದ್ದು, ಇದರೊಂದಿಗೆ ರಿಂಗ್ ರಸ್ತೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ಕೆಂದೇ 9 ಜೆಸಿಬಿಗಳನ್ನು ಸಹ ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…