ನಮ್ಮ ಮೈಸೂರ ದಸರಾ 2024

ಆಗಸದಲ್ಲಿ ಚಿತ್ತಾರ ಮೂಡಿಸಿದ ಡ್ರೋನ್‌ ಶೋ

ದಸರಾ ಡ್ರೋನ್‌ ಶೋಗೆ 2ನೇ ದಿನವೂ ಉತ್ತಮ ಸ್ಪಂದನೆ

ಸೆಸ್ಕ್‌ ಪ್ರಯತ್ನಕ್ಕೆ ಮನಸೋತ ಮೈಸೂರಿನ ಜನತೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕ್‌) ವತಿಯಿಂದ ಆಯೋಜಿಸಿದ್ದ ಡ್ರೋನ್‌ ಪ್ರದರ್ಶನ ಎರಡನೇ ದಿನವಾದ ಸೋಮವಾರ ರಾತ್ರಿಯೂ ಆಗಸದಲ್ಲಿ ಚಿತ್ತಾರ ಮೂಡಿಸಿ, ನೋಡುಗರನ್ನು ವಿಸ್ಮಯಗೊಳಿತು.

ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಡ್ರೋನ್‌ ಶೋನಲ್ಲಿ ಬರೊಬ್ಬರಿ 1500 ಡ್ರೋನ್‌ಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಿದವು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ರಾಜ್ಯದಲ್ಲೇ ಹಾಗೂ ಮೈಸೂರು ದಸರೆಯಲ್ಲಿ ಮೊದಲ ಬಾರಿಗೆ ನಡೆದ ಅತಿದೊಡ್ಡ ಡ್ರೋನ್ ಪ್ರದರ್ಶನ ಸಾಂಸ್ಕೃತಿಕ ನಗರಿಯ ಜನರಿಗೆ ಮರೆಯಲಾಗದ ಅನುಭವ ನೀಡುವಲ್ಲಿ ಯಶಸ್ವಿಯಾಯಿತು.

ರಾತ್ರಿ 7:45ಕ್ಕೆ ಆರಂಭಗೊಂಡ ಡ್ರೋನ್‌ ಪ್ರದರ್ಶನದಲ್ಲಿ ರಾಷ್ಟ್ರಧ್ವಜ, ಚಂದ್ರಯಾನ, ವಿಶ್ವಭೂಪಟ, ಸೈನಿಕ, ಕರ್ನಾಟಕ ಭೂಪಟ, ಅಂಬಾರಿ, ಸುವರ್ಣ ಕರ್ನಾಟಕ ಸಂಭ್ರಮ, ಅರಳಿಮರ, ತಿಮಿಂಗಿಲ, ಚಾಮುಂಡೇಶ್ವರಿ ಸೇರಿದಂತೆ 15ಕ್ಕೂ ಹೆಚ್ಚು ಕಲಾಕೃತಿಗಳು ನೆರೆದಿದ್ದ ಪ್ರೇಕ್ಷಕರನ್ನು ಮನರಂಜಿಸಿದವು.

ಮೊದಲ ದಿನವಾದ ಅ.6ರ ಭಾನುವಾರ ನಡೆದ ಆಕರ್ಷಕ ಡ್ರೋನ್‌ ಪ್ರದರ್ಶನ ವೀಕ್ಷಿಸಲು ಸಾವಿರಾರು ಸಂಖ್ಯೆಯ ಜನರು ಸೋಮವಾರ ಬನ್ನಿಮಂಟಪದ ಪಂಜಿನ ಕವಾಯತು ಮೈದಾನಕ್ಕೆ ಲಗ್ಗೆಯಿಟ್ಟಿದ್ದರು.

ವಿಜಯ್‌ ಪ್ರಕಾಶ್‌ ಹಾಡಿನ ಮೋಡಿ;
ಡ್ರೋನ್‌ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನೆಲೆ ಗಾಯಕ ವಿಜಯ್‌ ಪ್ರಕಾಶ್‌ ಮತ್ತು ತಂಡದಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ವಿಜಯ ಪ್ರಕಾಶ್ ಅವರು ತಮ್ಮ ಕಂಚಿನ ಕಂಠದಿಂದ ಪ್ರೇಕ್ಷಕರಿಗೆ ಸಂಗೀತದ ಸುಧೆ ಹರಿಸಿದರು. ತಮ್ಮ ಗಾಯನದ ಹಿಟ್‌ ಗೀತೆಗಳಾದ ಖಾಲಿ ಕ್ವಾಟ್ರು ಬಾಟ್ಲಿ ಅಂಗೆ ಲೈಫು, ಕುಲದಲ್ಲಿ ಕೀಳಾವುದೋ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಸೇರಿದಂತೆ ಹಲವು ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್‌ ಪ್ರಕಾಶ್‌ ಅವರು ದಿ. ಪುನೀತ್‌ ರಾಜಕುಮಾರ್‌ ಅವರ ಗೊಂಬೆ ಹೇಳುತೈತೆ ಹಾಡಿಗೆ ಇಡೀ ಮೈದಾನವೇ ತಲೆದೂಗಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ. ರವಿಶಂಕರ್‌, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ‌ವಿಭಾಗದ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

9 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

9 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

10 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

10 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

11 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

12 hours ago