ನಮ್ಮ ಮೈಸೂರ ದಸರಾ 2024

ಆಗಸದಲ್ಲಿ ಚಿತ್ತಾರ ಮೂಡಿಸಿದ ಡ್ರೋನ್‌ ಶೋ

ದಸರಾ ಡ್ರೋನ್‌ ಶೋಗೆ 2ನೇ ದಿನವೂ ಉತ್ತಮ ಸ್ಪಂದನೆ

ಸೆಸ್ಕ್‌ ಪ್ರಯತ್ನಕ್ಕೆ ಮನಸೋತ ಮೈಸೂರಿನ ಜನತೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕ್‌) ವತಿಯಿಂದ ಆಯೋಜಿಸಿದ್ದ ಡ್ರೋನ್‌ ಪ್ರದರ್ಶನ ಎರಡನೇ ದಿನವಾದ ಸೋಮವಾರ ರಾತ್ರಿಯೂ ಆಗಸದಲ್ಲಿ ಚಿತ್ತಾರ ಮೂಡಿಸಿ, ನೋಡುಗರನ್ನು ವಿಸ್ಮಯಗೊಳಿತು.

ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಡ್ರೋನ್‌ ಶೋನಲ್ಲಿ ಬರೊಬ್ಬರಿ 1500 ಡ್ರೋನ್‌ಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಿದವು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ರಾಜ್ಯದಲ್ಲೇ ಹಾಗೂ ಮೈಸೂರು ದಸರೆಯಲ್ಲಿ ಮೊದಲ ಬಾರಿಗೆ ನಡೆದ ಅತಿದೊಡ್ಡ ಡ್ರೋನ್ ಪ್ರದರ್ಶನ ಸಾಂಸ್ಕೃತಿಕ ನಗರಿಯ ಜನರಿಗೆ ಮರೆಯಲಾಗದ ಅನುಭವ ನೀಡುವಲ್ಲಿ ಯಶಸ್ವಿಯಾಯಿತು.

ರಾತ್ರಿ 7:45ಕ್ಕೆ ಆರಂಭಗೊಂಡ ಡ್ರೋನ್‌ ಪ್ರದರ್ಶನದಲ್ಲಿ ರಾಷ್ಟ್ರಧ್ವಜ, ಚಂದ್ರಯಾನ, ವಿಶ್ವಭೂಪಟ, ಸೈನಿಕ, ಕರ್ನಾಟಕ ಭೂಪಟ, ಅಂಬಾರಿ, ಸುವರ್ಣ ಕರ್ನಾಟಕ ಸಂಭ್ರಮ, ಅರಳಿಮರ, ತಿಮಿಂಗಿಲ, ಚಾಮುಂಡೇಶ್ವರಿ ಸೇರಿದಂತೆ 15ಕ್ಕೂ ಹೆಚ್ಚು ಕಲಾಕೃತಿಗಳು ನೆರೆದಿದ್ದ ಪ್ರೇಕ್ಷಕರನ್ನು ಮನರಂಜಿಸಿದವು.

ಮೊದಲ ದಿನವಾದ ಅ.6ರ ಭಾನುವಾರ ನಡೆದ ಆಕರ್ಷಕ ಡ್ರೋನ್‌ ಪ್ರದರ್ಶನ ವೀಕ್ಷಿಸಲು ಸಾವಿರಾರು ಸಂಖ್ಯೆಯ ಜನರು ಸೋಮವಾರ ಬನ್ನಿಮಂಟಪದ ಪಂಜಿನ ಕವಾಯತು ಮೈದಾನಕ್ಕೆ ಲಗ್ಗೆಯಿಟ್ಟಿದ್ದರು.

ವಿಜಯ್‌ ಪ್ರಕಾಶ್‌ ಹಾಡಿನ ಮೋಡಿ;
ಡ್ರೋನ್‌ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನೆಲೆ ಗಾಯಕ ವಿಜಯ್‌ ಪ್ರಕಾಶ್‌ ಮತ್ತು ತಂಡದಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ವಿಜಯ ಪ್ರಕಾಶ್ ಅವರು ತಮ್ಮ ಕಂಚಿನ ಕಂಠದಿಂದ ಪ್ರೇಕ್ಷಕರಿಗೆ ಸಂಗೀತದ ಸುಧೆ ಹರಿಸಿದರು. ತಮ್ಮ ಗಾಯನದ ಹಿಟ್‌ ಗೀತೆಗಳಾದ ಖಾಲಿ ಕ್ವಾಟ್ರು ಬಾಟ್ಲಿ ಅಂಗೆ ಲೈಫು, ಕುಲದಲ್ಲಿ ಕೀಳಾವುದೋ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಸೇರಿದಂತೆ ಹಲವು ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್‌ ಪ್ರಕಾಶ್‌ ಅವರು ದಿ. ಪುನೀತ್‌ ರಾಜಕುಮಾರ್‌ ಅವರ ಗೊಂಬೆ ಹೇಳುತೈತೆ ಹಾಡಿಗೆ ಇಡೀ ಮೈದಾನವೇ ತಲೆದೂಗಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ. ರವಿಶಂಕರ್‌, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ‌ವಿಭಾಗದ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

26 mins ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

2 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

3 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

3 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

8 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

8 hours ago