ದಸರಾ ಡ್ರೋನ್ ಶೋಗೆ 2ನೇ ದಿನವೂ ಉತ್ತಮ ಸ್ಪಂದನೆ
ಸೆಸ್ಕ್ ಪ್ರಯತ್ನಕ್ಕೆ ಮನಸೋತ ಮೈಸೂರಿನ ಜನತೆ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್) ವತಿಯಿಂದ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ಎರಡನೇ ದಿನವಾದ ಸೋಮವಾರ ರಾತ್ರಿಯೂ ಆಗಸದಲ್ಲಿ ಚಿತ್ತಾರ ಮೂಡಿಸಿ, ನೋಡುಗರನ್ನು ವಿಸ್ಮಯಗೊಳಿತು.
ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಡ್ರೋನ್ ಶೋನಲ್ಲಿ ಬರೊಬ್ಬರಿ 1500 ಡ್ರೋನ್ಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಿದವು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ರಾಜ್ಯದಲ್ಲೇ ಹಾಗೂ ಮೈಸೂರು ದಸರೆಯಲ್ಲಿ ಮೊದಲ ಬಾರಿಗೆ ನಡೆದ ಅತಿದೊಡ್ಡ ಡ್ರೋನ್ ಪ್ರದರ್ಶನ ಸಾಂಸ್ಕೃತಿಕ ನಗರಿಯ ಜನರಿಗೆ ಮರೆಯಲಾಗದ ಅನುಭವ ನೀಡುವಲ್ಲಿ ಯಶಸ್ವಿಯಾಯಿತು.
ರಾತ್ರಿ 7:45ಕ್ಕೆ ಆರಂಭಗೊಂಡ ಡ್ರೋನ್ ಪ್ರದರ್ಶನದಲ್ಲಿ ರಾಷ್ಟ್ರಧ್ವಜ, ಚಂದ್ರಯಾನ, ವಿಶ್ವಭೂಪಟ, ಸೈನಿಕ, ಕರ್ನಾಟಕ ಭೂಪಟ, ಅಂಬಾರಿ, ಸುವರ್ಣ ಕರ್ನಾಟಕ ಸಂಭ್ರಮ, ಅರಳಿಮರ, ತಿಮಿಂಗಿಲ, ಚಾಮುಂಡೇಶ್ವರಿ ಸೇರಿದಂತೆ 15ಕ್ಕೂ ಹೆಚ್ಚು ಕಲಾಕೃತಿಗಳು ನೆರೆದಿದ್ದ ಪ್ರೇಕ್ಷಕರನ್ನು ಮನರಂಜಿಸಿದವು.
ಮೊದಲ ದಿನವಾದ ಅ.6ರ ಭಾನುವಾರ ನಡೆದ ಆಕರ್ಷಕ ಡ್ರೋನ್ ಪ್ರದರ್ಶನ ವೀಕ್ಷಿಸಲು ಸಾವಿರಾರು ಸಂಖ್ಯೆಯ ಜನರು ಸೋಮವಾರ ಬನ್ನಿಮಂಟಪದ ಪಂಜಿನ ಕವಾಯತು ಮೈದಾನಕ್ಕೆ ಲಗ್ಗೆಯಿಟ್ಟಿದ್ದರು.
ವಿಜಯ್ ಪ್ರಕಾಶ್ ಹಾಡಿನ ಮೋಡಿ;
ಡ್ರೋನ್ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ತಂಡದಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ವಿಜಯ ಪ್ರಕಾಶ್ ಅವರು ತಮ್ಮ ಕಂಚಿನ ಕಂಠದಿಂದ ಪ್ರೇಕ್ಷಕರಿಗೆ ಸಂಗೀತದ ಸುಧೆ ಹರಿಸಿದರು. ತಮ್ಮ ಗಾಯನದ ಹಿಟ್ ಗೀತೆಗಳಾದ ಖಾಲಿ ಕ್ವಾಟ್ರು ಬಾಟ್ಲಿ ಅಂಗೆ ಲೈಫು, ಕುಲದಲ್ಲಿ ಕೀಳಾವುದೋ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಸೇರಿದಂತೆ ಹಲವು ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಅವರು ದಿ. ಪುನೀತ್ ರಾಜಕುಮಾರ್ ಅವರ ಗೊಂಬೆ ಹೇಳುತೈತೆ ಹಾಡಿಗೆ ಇಡೀ ಮೈದಾನವೇ ತಲೆದೂಗಿತು.
ಕಾರ್ಯಕ್ರಮದಲ್ಲಿ ಶಾಸಕ ಡಿ. ರವಿಶಂಕರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…