ನಮ್ಮ ಮೈಸೂರ ದಸರಾ 2024

ಆಗಸದಲ್ಲಿ ಚಿತ್ತಾರ ಮೂಡಿಸಿದ ಡ್ರೋನ್‌ ಶೋ

ದಸರಾ ಡ್ರೋನ್‌ ಶೋಗೆ 2ನೇ ದಿನವೂ ಉತ್ತಮ ಸ್ಪಂದನೆ

ಸೆಸ್ಕ್‌ ಪ್ರಯತ್ನಕ್ಕೆ ಮನಸೋತ ಮೈಸೂರಿನ ಜನತೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕ್‌) ವತಿಯಿಂದ ಆಯೋಜಿಸಿದ್ದ ಡ್ರೋನ್‌ ಪ್ರದರ್ಶನ ಎರಡನೇ ದಿನವಾದ ಸೋಮವಾರ ರಾತ್ರಿಯೂ ಆಗಸದಲ್ಲಿ ಚಿತ್ತಾರ ಮೂಡಿಸಿ, ನೋಡುಗರನ್ನು ವಿಸ್ಮಯಗೊಳಿತು.

ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಡ್ರೋನ್‌ ಶೋನಲ್ಲಿ ಬರೊಬ್ಬರಿ 1500 ಡ್ರೋನ್‌ಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಿದವು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ರಾಜ್ಯದಲ್ಲೇ ಹಾಗೂ ಮೈಸೂರು ದಸರೆಯಲ್ಲಿ ಮೊದಲ ಬಾರಿಗೆ ನಡೆದ ಅತಿದೊಡ್ಡ ಡ್ರೋನ್ ಪ್ರದರ್ಶನ ಸಾಂಸ್ಕೃತಿಕ ನಗರಿಯ ಜನರಿಗೆ ಮರೆಯಲಾಗದ ಅನುಭವ ನೀಡುವಲ್ಲಿ ಯಶಸ್ವಿಯಾಯಿತು.

ರಾತ್ರಿ 7:45ಕ್ಕೆ ಆರಂಭಗೊಂಡ ಡ್ರೋನ್‌ ಪ್ರದರ್ಶನದಲ್ಲಿ ರಾಷ್ಟ್ರಧ್ವಜ, ಚಂದ್ರಯಾನ, ವಿಶ್ವಭೂಪಟ, ಸೈನಿಕ, ಕರ್ನಾಟಕ ಭೂಪಟ, ಅಂಬಾರಿ, ಸುವರ್ಣ ಕರ್ನಾಟಕ ಸಂಭ್ರಮ, ಅರಳಿಮರ, ತಿಮಿಂಗಿಲ, ಚಾಮುಂಡೇಶ್ವರಿ ಸೇರಿದಂತೆ 15ಕ್ಕೂ ಹೆಚ್ಚು ಕಲಾಕೃತಿಗಳು ನೆರೆದಿದ್ದ ಪ್ರೇಕ್ಷಕರನ್ನು ಮನರಂಜಿಸಿದವು.

ಮೊದಲ ದಿನವಾದ ಅ.6ರ ಭಾನುವಾರ ನಡೆದ ಆಕರ್ಷಕ ಡ್ರೋನ್‌ ಪ್ರದರ್ಶನ ವೀಕ್ಷಿಸಲು ಸಾವಿರಾರು ಸಂಖ್ಯೆಯ ಜನರು ಸೋಮವಾರ ಬನ್ನಿಮಂಟಪದ ಪಂಜಿನ ಕವಾಯತು ಮೈದಾನಕ್ಕೆ ಲಗ್ಗೆಯಿಟ್ಟಿದ್ದರು.

ವಿಜಯ್‌ ಪ್ರಕಾಶ್‌ ಹಾಡಿನ ಮೋಡಿ;
ಡ್ರೋನ್‌ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನೆಲೆ ಗಾಯಕ ವಿಜಯ್‌ ಪ್ರಕಾಶ್‌ ಮತ್ತು ತಂಡದಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ವಿಜಯ ಪ್ರಕಾಶ್ ಅವರು ತಮ್ಮ ಕಂಚಿನ ಕಂಠದಿಂದ ಪ್ರೇಕ್ಷಕರಿಗೆ ಸಂಗೀತದ ಸುಧೆ ಹರಿಸಿದರು. ತಮ್ಮ ಗಾಯನದ ಹಿಟ್‌ ಗೀತೆಗಳಾದ ಖಾಲಿ ಕ್ವಾಟ್ರು ಬಾಟ್ಲಿ ಅಂಗೆ ಲೈಫು, ಕುಲದಲ್ಲಿ ಕೀಳಾವುದೋ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಸೇರಿದಂತೆ ಹಲವು ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್‌ ಪ್ರಕಾಶ್‌ ಅವರು ದಿ. ಪುನೀತ್‌ ರಾಜಕುಮಾರ್‌ ಅವರ ಗೊಂಬೆ ಹೇಳುತೈತೆ ಹಾಡಿಗೆ ಇಡೀ ಮೈದಾನವೇ ತಲೆದೂಗಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ. ರವಿಶಂಕರ್‌, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ‌ವಿಭಾಗದ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago