ನಮ್ಮ ಮೈಸೂರ ದಸರಾ 2024

ಆಗಸದಲ್ಲಿ ಚಿತ್ತಾರ ಮೂಡಿಸಿದ ಡ್ರೋನ್‌ ಶೋ

ದಸರಾ ಡ್ರೋನ್‌ ಶೋಗೆ 2ನೇ ದಿನವೂ ಉತ್ತಮ ಸ್ಪಂದನೆ

ಸೆಸ್ಕ್‌ ಪ್ರಯತ್ನಕ್ಕೆ ಮನಸೋತ ಮೈಸೂರಿನ ಜನತೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕ್‌) ವತಿಯಿಂದ ಆಯೋಜಿಸಿದ್ದ ಡ್ರೋನ್‌ ಪ್ರದರ್ಶನ ಎರಡನೇ ದಿನವಾದ ಸೋಮವಾರ ರಾತ್ರಿಯೂ ಆಗಸದಲ್ಲಿ ಚಿತ್ತಾರ ಮೂಡಿಸಿ, ನೋಡುಗರನ್ನು ವಿಸ್ಮಯಗೊಳಿತು.

ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಡ್ರೋನ್‌ ಶೋನಲ್ಲಿ ಬರೊಬ್ಬರಿ 1500 ಡ್ರೋನ್‌ಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಿದವು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ರಾಜ್ಯದಲ್ಲೇ ಹಾಗೂ ಮೈಸೂರು ದಸರೆಯಲ್ಲಿ ಮೊದಲ ಬಾರಿಗೆ ನಡೆದ ಅತಿದೊಡ್ಡ ಡ್ರೋನ್ ಪ್ರದರ್ಶನ ಸಾಂಸ್ಕೃತಿಕ ನಗರಿಯ ಜನರಿಗೆ ಮರೆಯಲಾಗದ ಅನುಭವ ನೀಡುವಲ್ಲಿ ಯಶಸ್ವಿಯಾಯಿತು.

ರಾತ್ರಿ 7:45ಕ್ಕೆ ಆರಂಭಗೊಂಡ ಡ್ರೋನ್‌ ಪ್ರದರ್ಶನದಲ್ಲಿ ರಾಷ್ಟ್ರಧ್ವಜ, ಚಂದ್ರಯಾನ, ವಿಶ್ವಭೂಪಟ, ಸೈನಿಕ, ಕರ್ನಾಟಕ ಭೂಪಟ, ಅಂಬಾರಿ, ಸುವರ್ಣ ಕರ್ನಾಟಕ ಸಂಭ್ರಮ, ಅರಳಿಮರ, ತಿಮಿಂಗಿಲ, ಚಾಮುಂಡೇಶ್ವರಿ ಸೇರಿದಂತೆ 15ಕ್ಕೂ ಹೆಚ್ಚು ಕಲಾಕೃತಿಗಳು ನೆರೆದಿದ್ದ ಪ್ರೇಕ್ಷಕರನ್ನು ಮನರಂಜಿಸಿದವು.

ಮೊದಲ ದಿನವಾದ ಅ.6ರ ಭಾನುವಾರ ನಡೆದ ಆಕರ್ಷಕ ಡ್ರೋನ್‌ ಪ್ರದರ್ಶನ ವೀಕ್ಷಿಸಲು ಸಾವಿರಾರು ಸಂಖ್ಯೆಯ ಜನರು ಸೋಮವಾರ ಬನ್ನಿಮಂಟಪದ ಪಂಜಿನ ಕವಾಯತು ಮೈದಾನಕ್ಕೆ ಲಗ್ಗೆಯಿಟ್ಟಿದ್ದರು.

ವಿಜಯ್‌ ಪ್ರಕಾಶ್‌ ಹಾಡಿನ ಮೋಡಿ;
ಡ್ರೋನ್‌ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನೆಲೆ ಗಾಯಕ ವಿಜಯ್‌ ಪ್ರಕಾಶ್‌ ಮತ್ತು ತಂಡದಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ವಿಜಯ ಪ್ರಕಾಶ್ ಅವರು ತಮ್ಮ ಕಂಚಿನ ಕಂಠದಿಂದ ಪ್ರೇಕ್ಷಕರಿಗೆ ಸಂಗೀತದ ಸುಧೆ ಹರಿಸಿದರು. ತಮ್ಮ ಗಾಯನದ ಹಿಟ್‌ ಗೀತೆಗಳಾದ ಖಾಲಿ ಕ್ವಾಟ್ರು ಬಾಟ್ಲಿ ಅಂಗೆ ಲೈಫು, ಕುಲದಲ್ಲಿ ಕೀಳಾವುದೋ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಸೇರಿದಂತೆ ಹಲವು ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್‌ ಪ್ರಕಾಶ್‌ ಅವರು ದಿ. ಪುನೀತ್‌ ರಾಜಕುಮಾರ್‌ ಅವರ ಗೊಂಬೆ ಹೇಳುತೈತೆ ಹಾಡಿಗೆ ಇಡೀ ಮೈದಾನವೇ ತಲೆದೂಗಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ. ರವಿಶಂಕರ್‌, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ‌ವಿಭಾಗದ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

3 hours ago