ನಮ್ಮ ಮೈಸೂರ ದಸರಾ 2024

ಜಂಬೂಸವಾರಿ ಮೆರವಣಿಗೆಯಲ್ಲಿ ಮೆರಗು ನೀಡಲಿರುವ ಕಲಾತಂಡಗಳು

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಹಲವು ಜಾನಪದ ಕಲಾತಂಡಗಳು ಮೆರಗು ನೀಡಲಿವೆ.

ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ, ಕಹಳೆ ನಾದ, ಡೊಳ್ಳು ಕುಣಿತ, ಮಕ್ಕಳ ಕೋಲಾಟ ಸೇರಿದಂತೆ ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿ ತಮ್ಮ ಮೆರುಗನ್ನು ನೀಡಲಿವೆ.

ಅರಮನೆ ಆವರಣದಲ್ಲಿ ಆರಂಭಗೊಳ್ಳಲಿರುವ ಜಾನಪದ ಕುಣಿತಗಳು ಗ್ರಾಮೀಣ ಸೊಗಡು, ಕಲಾವಿದರ ಪ್ರತಿಭೆಯನ್ನು ಅನಾವರಣಗೊಳಿಸಲಿವೆ. ಜಂಬೂಸವಾರಿಯಲ್ಲಿ ಸ್ತಬ್ಧಚಿತ್ರಗಳ ನಡುವೆ ಈ ಕಲಾತಂಡಗಳು ಸಿಕ್ಕ ಅವಕಾಶದಲ್ಲೇ ನೋಡುಗರಿಗೆ ಸಂತೋಷ ಉಂಟುಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದವು.

ನಂದೀಧ್ವಜ ಹೊತ್ತು ಹೊರಟ ಕಲಾತಂಡದ ಹಿಂದೆ ವೀರಭದ್ರ ಕುಣಿತ ತಂಡಗಳ ಕಲಾವಿದರ ಅಬ್ಬರ, ಆರ್ಭಟ, ಕೆಂಗಣ್ಣುಗಳೊಂದಿಗೆ ಖಡ್ಗ ಝಳಪಿಸುತ್ತಾ ವಾದ್ಯಗಳ ನಾದಕ್ಕೆ ಹೆಜ್ಜೆ ಹಾಕುತ್ತಿದ್ದಂತೆ ಜನರಲ್ಲಿ ಆಲಸ್ಯ ಮಾಯವಾಗಲಿದೆ.

ಇದೆಲ್ಲದರ ಜೊತೆಗೆ ಕಂಗಿಲು ನೃತ್ಯ, ಕೋಲಾಟ, ಚಂಡೆಮೇಳ, ಪೂಜಾ ಕುಣಿತ, ಪಟ ಕುಣಿತ, ಲಂಬಾಣಿ ನೃತ್ಯ, ಸಿದ್ದಿ ಡಮಾಯಿ ನೃತ್ಯ, ಗಾರುಡಿ ಗೊಂಬೆ, ಮರಗಾಲು ಕುಣಿತ, ಕೀಲುಕುದುರೆ ಇತ್ಯಾದಿ ತಂಡಗಳು ನೋಡುಗರ ಮನದಾಳದಲ್ಲಿ ಅಚ್ಚೊತ್ತಲಿವೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

51 mins ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

2 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

2 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

2 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

3 hours ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

3 hours ago