ನಮ್ಮ ಮೈಸೂರ ದಸರಾ 2024

ಜಂಬೂಸವಾರಿ ಮೆರವಣಿಗೆಯಲ್ಲಿ ಮೆರಗು ನೀಡಲಿರುವ ಕಲಾತಂಡಗಳು

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಹಲವು ಜಾನಪದ ಕಲಾತಂಡಗಳು ಮೆರಗು ನೀಡಲಿವೆ.

ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ, ಕಹಳೆ ನಾದ, ಡೊಳ್ಳು ಕುಣಿತ, ಮಕ್ಕಳ ಕೋಲಾಟ ಸೇರಿದಂತೆ ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿ ತಮ್ಮ ಮೆರುಗನ್ನು ನೀಡಲಿವೆ.

ಅರಮನೆ ಆವರಣದಲ್ಲಿ ಆರಂಭಗೊಳ್ಳಲಿರುವ ಜಾನಪದ ಕುಣಿತಗಳು ಗ್ರಾಮೀಣ ಸೊಗಡು, ಕಲಾವಿದರ ಪ್ರತಿಭೆಯನ್ನು ಅನಾವರಣಗೊಳಿಸಲಿವೆ. ಜಂಬೂಸವಾರಿಯಲ್ಲಿ ಸ್ತಬ್ಧಚಿತ್ರಗಳ ನಡುವೆ ಈ ಕಲಾತಂಡಗಳು ಸಿಕ್ಕ ಅವಕಾಶದಲ್ಲೇ ನೋಡುಗರಿಗೆ ಸಂತೋಷ ಉಂಟುಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದವು.

ನಂದೀಧ್ವಜ ಹೊತ್ತು ಹೊರಟ ಕಲಾತಂಡದ ಹಿಂದೆ ವೀರಭದ್ರ ಕುಣಿತ ತಂಡಗಳ ಕಲಾವಿದರ ಅಬ್ಬರ, ಆರ್ಭಟ, ಕೆಂಗಣ್ಣುಗಳೊಂದಿಗೆ ಖಡ್ಗ ಝಳಪಿಸುತ್ತಾ ವಾದ್ಯಗಳ ನಾದಕ್ಕೆ ಹೆಜ್ಜೆ ಹಾಕುತ್ತಿದ್ದಂತೆ ಜನರಲ್ಲಿ ಆಲಸ್ಯ ಮಾಯವಾಗಲಿದೆ.

ಇದೆಲ್ಲದರ ಜೊತೆಗೆ ಕಂಗಿಲು ನೃತ್ಯ, ಕೋಲಾಟ, ಚಂಡೆಮೇಳ, ಪೂಜಾ ಕುಣಿತ, ಪಟ ಕುಣಿತ, ಲಂಬಾಣಿ ನೃತ್ಯ, ಸಿದ್ದಿ ಡಮಾಯಿ ನೃತ್ಯ, ಗಾರುಡಿ ಗೊಂಬೆ, ಮರಗಾಲು ಕುಣಿತ, ಕೀಲುಕುದುರೆ ಇತ್ಯಾದಿ ತಂಡಗಳು ನೋಡುಗರ ಮನದಾಳದಲ್ಲಿ ಅಚ್ಚೊತ್ತಲಿವೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

1 hour ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

3 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

3 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

3 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

3 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

3 hours ago