ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಹಲವು ಜಾನಪದ ಕಲಾತಂಡಗಳು ಮೆರಗು ನೀಡಲಿವೆ.
ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ, ಕಹಳೆ ನಾದ, ಡೊಳ್ಳು ಕುಣಿತ, ಮಕ್ಕಳ ಕೋಲಾಟ ಸೇರಿದಂತೆ ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿ ತಮ್ಮ ಮೆರುಗನ್ನು ನೀಡಲಿವೆ.
ಅರಮನೆ ಆವರಣದಲ್ಲಿ ಆರಂಭಗೊಳ್ಳಲಿರುವ ಜಾನಪದ ಕುಣಿತಗಳು ಗ್ರಾಮೀಣ ಸೊಗಡು, ಕಲಾವಿದರ ಪ್ರತಿಭೆಯನ್ನು ಅನಾವರಣಗೊಳಿಸಲಿವೆ. ಜಂಬೂಸವಾರಿಯಲ್ಲಿ ಸ್ತಬ್ಧಚಿತ್ರಗಳ ನಡುವೆ ಈ ಕಲಾತಂಡಗಳು ಸಿಕ್ಕ ಅವಕಾಶದಲ್ಲೇ ನೋಡುಗರಿಗೆ ಸಂತೋಷ ಉಂಟುಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದವು.
ನಂದೀಧ್ವಜ ಹೊತ್ತು ಹೊರಟ ಕಲಾತಂಡದ ಹಿಂದೆ ವೀರಭದ್ರ ಕುಣಿತ ತಂಡಗಳ ಕಲಾವಿದರ ಅಬ್ಬರ, ಆರ್ಭಟ, ಕೆಂಗಣ್ಣುಗಳೊಂದಿಗೆ ಖಡ್ಗ ಝಳಪಿಸುತ್ತಾ ವಾದ್ಯಗಳ ನಾದಕ್ಕೆ ಹೆಜ್ಜೆ ಹಾಕುತ್ತಿದ್ದಂತೆ ಜನರಲ್ಲಿ ಆಲಸ್ಯ ಮಾಯವಾಗಲಿದೆ.
ಇದೆಲ್ಲದರ ಜೊತೆಗೆ ಕಂಗಿಲು ನೃತ್ಯ, ಕೋಲಾಟ, ಚಂಡೆಮೇಳ, ಪೂಜಾ ಕುಣಿತ, ಪಟ ಕುಣಿತ, ಲಂಬಾಣಿ ನೃತ್ಯ, ಸಿದ್ದಿ ಡಮಾಯಿ ನೃತ್ಯ, ಗಾರುಡಿ ಗೊಂಬೆ, ಮರಗಾಲು ಕುಣಿತ, ಕೀಲುಕುದುರೆ ಇತ್ಯಾದಿ ತಂಡಗಳು ನೋಡುಗರ ಮನದಾಳದಲ್ಲಿ ಅಚ್ಚೊತ್ತಲಿವೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…