ನಮ್ಮ ಮೈಸೂರ ದಸರಾ 2024

ಜಂಬೂಸವಾರಿ ಮೆರವಣಿಗೆಯಲ್ಲಿ ಮೆರಗು ನೀಡಲಿರುವ ಕಲಾತಂಡಗಳು

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಹಲವು ಜಾನಪದ ಕಲಾತಂಡಗಳು ಮೆರಗು ನೀಡಲಿವೆ.

ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ, ಕಹಳೆ ನಾದ, ಡೊಳ್ಳು ಕುಣಿತ, ಮಕ್ಕಳ ಕೋಲಾಟ ಸೇರಿದಂತೆ ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿ ತಮ್ಮ ಮೆರುಗನ್ನು ನೀಡಲಿವೆ.

ಅರಮನೆ ಆವರಣದಲ್ಲಿ ಆರಂಭಗೊಳ್ಳಲಿರುವ ಜಾನಪದ ಕುಣಿತಗಳು ಗ್ರಾಮೀಣ ಸೊಗಡು, ಕಲಾವಿದರ ಪ್ರತಿಭೆಯನ್ನು ಅನಾವರಣಗೊಳಿಸಲಿವೆ. ಜಂಬೂಸವಾರಿಯಲ್ಲಿ ಸ್ತಬ್ಧಚಿತ್ರಗಳ ನಡುವೆ ಈ ಕಲಾತಂಡಗಳು ಸಿಕ್ಕ ಅವಕಾಶದಲ್ಲೇ ನೋಡುಗರಿಗೆ ಸಂತೋಷ ಉಂಟುಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದವು.

ನಂದೀಧ್ವಜ ಹೊತ್ತು ಹೊರಟ ಕಲಾತಂಡದ ಹಿಂದೆ ವೀರಭದ್ರ ಕುಣಿತ ತಂಡಗಳ ಕಲಾವಿದರ ಅಬ್ಬರ, ಆರ್ಭಟ, ಕೆಂಗಣ್ಣುಗಳೊಂದಿಗೆ ಖಡ್ಗ ಝಳಪಿಸುತ್ತಾ ವಾದ್ಯಗಳ ನಾದಕ್ಕೆ ಹೆಜ್ಜೆ ಹಾಕುತ್ತಿದ್ದಂತೆ ಜನರಲ್ಲಿ ಆಲಸ್ಯ ಮಾಯವಾಗಲಿದೆ.

ಇದೆಲ್ಲದರ ಜೊತೆಗೆ ಕಂಗಿಲು ನೃತ್ಯ, ಕೋಲಾಟ, ಚಂಡೆಮೇಳ, ಪೂಜಾ ಕುಣಿತ, ಪಟ ಕುಣಿತ, ಲಂಬಾಣಿ ನೃತ್ಯ, ಸಿದ್ದಿ ಡಮಾಯಿ ನೃತ್ಯ, ಗಾರುಡಿ ಗೊಂಬೆ, ಮರಗಾಲು ಕುಣಿತ, ಕೀಲುಕುದುರೆ ಇತ್ಯಾದಿ ತಂಡಗಳು ನೋಡುಗರ ಮನದಾಳದಲ್ಲಿ ಅಚ್ಚೊತ್ತಲಿವೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

10 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

10 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

11 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

11 hours ago