ನಮ್ಮ ಮೈಸೂರ ದಸರಾ 2024

ಅರ್ಜುನ ಆನೆಯ ನೆನಪಿನಾರ್ಥ ಮಾವುತರಿಗೆ ಬೆಡ್‌ಶೀಟ್ ವಿತರಣೆ‌

ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್‌ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್‌ಶೀಟ್‌ಗಳನ್ನು ವಿತರಿಸಿದರು.

ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್‌ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್‌ಶಿಟ್‌ಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಿಎಫ್‌ಒ ಪ್ರಭುಗೌಡ, ಆರ್‌ಎಫ್‌ ಸಂತೋಷ್‌ಕುಮಾರ್‌, ಆದಿತ್ಯ ಸುಬ್ರಮಣ್ಯ, ಪ್ರಶಾಂತ್‌, ಸಂತೋಷ್‌ ನವೀನ್‌, ಪ್ರಜ್ವಲ್‌, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.

andolana

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

3 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

12 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

22 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago