ಮೈಸೂರು ದಸರಾ ಪುಸ್ತಕ ಮೇಳಕ್ಕೆ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ
ಮೈಸೂರು: ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಗರದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಹಮ್ಮಿಕೊಂಡಿರುವ ಪುಸ್ತಕ ಮೇಳವನ್ನು ಹಿರಿಯ ಸಾಹಿತಿ ನಾಡೋಜ ಹಂಪಾ ನಾಗರಾಜಯ್ಯ ಅವರು ಉದ್ಘಾಟಿಸಿದರು.
ಮೇಳ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಪುಸ್ತಕ ಮೇಳ ಎಂಬುದು ವಾಗ್ದೇವಿಯ ಭಂಡಾರ, ಸರಸ್ವತಿಯ ಮಂದಿರ. ಎಲ್ಲಾ ಓದುಗರಿಗೂ ಸರಸ್ವತಿಯ ಅನುಗ್ರಹ ಸುಲಭವಾಗಿ ಲಭಿಸುವುದಿಲ್ಲ. ಅದಕ್ಕೆ ಶ್ರದ್ಧೆ, ಭಕ್ತಿ ಹಾಗೂ ವಿನಯದಿಂದ ಮನಸಿಟ್ಟು ಓದಿದರೆ ಮಾತ್ರ ದೇವರಿಂದ ಆಗಲಿ ನಾವು ಮಾಡಿದ ಕೆಲಸಕ್ಕಾಗಲಿ ಪ್ರತಿಫಲ ಸಿಗುತ್ತದೆ ಎಂದು ಹೇಳಿದರು.
ಈ ಬಾರಿಯ ಪುಸ್ತಕ ಮೇಳ 10 ದಿನಗಳ ಕಾಲ ನಡೆಯಲಿದ್ದು, ದಸರಾ ನೋಡಲು ಬಂದವರು ಈ ಮೇಳವನ್ನು ಆನಂದಿಸಬೇಕು. ಒಂದೇ ಸೂರಿನಡಿ ಸದಭಿರುಚಿಯ ನಾನಾ ಪುಸ್ತಕಗಳು ಲಭ್ಯವಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಪುಸ್ತಕ ಪ್ರೇಮಿಗಳಿಗೆ ಸಲಹೆ ನೀಡಿದರು.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಮಾತನಾಡಿ, ಪುಸ್ತಕ ಹಾಗೂ ಸಂಸ್ಕೃತಿಯ ಆರಾಧಕರಾದ ಒಬ್ಬ ಸಾಹಿತಿಯೇ ನಾಡಹಬ್ಬ ದಸರಾ ಮತ್ತು ಪುಸ್ತಕ ಮೇಳದ ಉದ್ಘಾಟನೆ ಮಾಡಿರುವುದು ಇತಿಹಾಸದಲ್ಲೇ ಮೊದಲು. ಇದು ಒಬ್ಬ ಸಾಹಿತಿ ಮತ್ತು ಉತ್ತಮ ವಾಗ್ಮಿಗೆ ದೊರೆತ ದೊಡ್ಡ ಗೌರವವಾಗಿದೆ ಎಂದು ತಿಳಿಸುತ್ತಾ ಈ ವೇಳೆ ಬಸವಣ್ಣನವರ ವಚನಗಳನ್ನು ನೆನಪಿಸಿದರು.
ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳದ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು ಮತ್ತು ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಸಾಹಿತ್ಯ ವಚನ ಚಿಂತನಾಮಾಲೆ, ವಿಶ್ವಕೋಶ, ನಿಘಂಟು ಪುಸ್ತಕಗಳು ಹೀಗೆ ಅನೇಕ ಪುಸ್ತಕಗಳು ಕಡಿಮೆ ದರದಲ್ಲಿ ಲಭ್ಯವಿದೆ. ಹಾಗಾಗಿ ಈ ಬಾರಿಯ ಪುಸ್ತಕ ಮೇಳವು ಸಾಹಿತ್ಯ ಪ್ರಿಯರಿಗೆ ಓದಲು ಅಥವಾ ಉಡುಗೊರೆ ನೀಡಲು ಸದಾವಕಾಶವಾಗಿದೆ ಎಂದರು.
ಈ ಬಾರಿಯ ಪುಸ್ತಕ ಮೇಳದಲ್ಲಿ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರ, ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಂಗ, ವೇದ ಬುಕ್ ಹೌಸ್, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ತಿಳಿ ಸಾಹಿತ್ಯ ಅಕಾಡೆಮಿ, ಸ್ವಪ್ನ ಬುಕ್ ಹೌಸ್ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕದಂಬ ಪ್ರಕಾಶನ ಭಾರತೀ ಪ್ರಕಾಶನ, ಕೇಂದ್ರ ಸಾಹಿತ್ಯ ಅಕಾಡೆಮಿ ಬೆಂಗಳೂರು,ನವ ಕರ್ನಾಟಕ ಪಬ್ಲಿಕೇಶನ್, ಸಾಹಿತ್ಯ ಸ್ಥಂಬ, ಶ್ರೀ ಕನಕ ಪುಸ್ತಕ ಬಂಡಾರ ಬೆಂಗಳೂರು ಸೇರಿದಂತೆ ಹಲವು ಪ್ರಾಧಿಕಾರದ ಮಳಿಗೆಗಳನ್ನು ತೆರೆಯಲಾಗಿದ್ದು, ಇದು ಕನ್ನಡ ಪುಸ್ತಕಾಭಿಮಾನಿಗಳನ್ನು ಆಕರ್ಷಿಸಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿ ದೇವಿ ಮಾಲಗತ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗೀಯ ಜಂಟಿ ನಿರ್ದೇಶಕರಾದ ವಿ ಎನ್ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ ಸುದರ್ಶನ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…