ಮೈಸೂರು: ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ ವಿತರಣೆ ಮಾಡಿದರು.
ಮಂಗಳವಾರ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಹಮ್ಮಿಕೊಂಡಿದ್ದ ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಬಹುಮಾನ ವಿತರಿಸಿದರು.
ಬಳಿಕ, ದಸರಾ ಚಲನಚಿತ್ರೋತ್ಸವ ಸಮಿತಿಯ ಉಪ ವಿಶೇಷಾಧಿಕಾರಿಗಳಾದ ಡಾ ಬಸವರಾಜ್ ಕೆ.ಎನ್. ಮಾತನಾಡಿ, ಕಿರು ಚಿತ್ರ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿತ್ತು, 73 ಚಿತ್ರಗಳು ಸ್ಪರ್ಧೆಯಲ್ಲಿ ಭಾಗವಿಸಿದ್ದವು. 4 ಜನರ ತೀರ್ಪುಗಾರರ ತಂಡ ಕಿರು ಚಿತ್ರಗಳನ್ನು ವೀಕ್ಷಿಸಿ ಆಯ್ಕೆ ಮಾಡಿತ್ತು. ಈ ಕಿರುಚಿತ್ರಗಳಿಗೆ ಬಹುಮಾನ ವಿತರಣೆ ಮಾಡಲಾಗುತ್ತಿದೆ ಎಂದರು.
ಕಿರುಚಿತ್ರ ಸ್ಪರ್ಧೆ ವಿಜೇತರು
ದಿಲೀಪ್ ಕುಮಾರ್ ನಿರ್ದೇಶನದ ಪೋಲಾರ್(ಪ್ರಥಮ), ಅಭಿಜಿತ್ ಪುರೋಹಿತ್ ನಿರ್ದೇಶನಕ ಲಕ್ಷ್ಮಿ(ದ್ವಿತೀಯ), ಎಸ್.ಪಿ. ಪವನ್ ನಿರ್ದೇಶಕನದ ಅನ್ವಾನ್ಟೆಡ್ ಕಿಡ್(ತೃತೀಯ) ಸ್ಥಾನ ಪಡೆದರೆ. ಸ್ಟ್ಯಾನಿ ಜಾಯ್ಸನ್ ನಿರ್ದೇಶನದ ತ್ರಿಕಾಲಮ್ ಚಿತ್ರಕ್ಕೆ ಉತ್ತಮ ಸಂಕಲನಕಾರ ಹಾಗೂ ಕೃತಾರ್ತ್ ಮಂಡೆಕುಟ್ಟಂಡ ನಿರ್ದೇಶನದ ವರ್ತಕಾಲಿ ಚಿತ್ರಕ್ಕೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿತು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಚಲನ ಚಿತ್ರ ನಟರಾದ ಮಂಡ್ಯ ರಮೇಶ್, ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ,ದಸರಾ ಚಲನ ಚಿತ್ರೋತ್ಸವ ಸಮಿತಿಯ ಉಪಾಧ್ಯಕ್ಷರುಗಳಾದ ಕಾಶಿನಾಥ್, ಬೃಂದ ಕೃಷ್ಣೇಗೌಡ, ರಮೇಶ್, ಸಯ್ಯದ್ ಅಬ್ರಹಾಂ, ತೀರ್ಪುಗಾರರಾದ ಪ್ರೊ ಸ್ವಪ್ನಾ, ಸಮಿತಿಯ ಕಾರ್ಯಾಧ್ಯಕ್ಷ ರಂಗೇಗೌಡ, ಸಮಿತಿ ಕಾರ್ಯದರ್ಶಿ ಹರೀಶ್ ಟಿ.ಕೆ ಹಾಗೂ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…
ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…
ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…
ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…
ಹುಬ್ಬಳ್ಳಿ : ಕ್ರೂರಿ ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ…
ನಾಗಮಂಗಲ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾ ಪಂಚ ಗ್ಯಾರಂಟಿ ಯೋಜನೆಯಡಿ ಈವರೆಗೆ 1 ಲಕ್ಷದ 25 ಸಾವಿರ ಕೋಟಿ…