ನಮ್ಮ ಮೈಸೂರ ದಸರಾ 2024

ಚಲನ ಚಿತ್ರೋತ್ಸವ ಕಿರು ಚಿತ್ರ ಸ್ಪರ್ಧೆ : ಸಚಿವರಿಂದ ಬಹುಮಾನ ವಿತರಣೆ

ಮೈಸೂರು: ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ ವಿತರಣೆ ಮಾಡಿದರು.

ಮಂಗಳವಾರ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಹಮ್ಮಿಕೊಂಡಿದ್ದ ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಬಹುಮಾನ ವಿತರಿಸಿದರು.

ಬಳಿಕ, ದಸರಾ ಚಲನಚಿತ್ರೋತ್ಸವ ಸಮಿತಿಯ ಉಪ ವಿಶೇಷಾಧಿಕಾರಿಗಳಾದ ಡಾ ಬಸವರಾಜ್ ಕೆ.ಎನ್. ಮಾತನಾಡಿ, ಕಿರು ಚಿತ್ರ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿತ್ತು, 73 ಚಿತ್ರಗಳು ಸ್ಪರ್ಧೆಯಲ್ಲಿ ಭಾಗವಿಸಿದ್ದವು. 4 ಜನರ ತೀರ್ಪುಗಾರರ ತಂಡ ಕಿರು ಚಿತ್ರಗಳನ್ನು ವೀಕ್ಷಿಸಿ ಆಯ್ಕೆ ಮಾಡಿತ್ತು. ಈ ಕಿರುಚಿತ್ರಗಳಿಗೆ ಬಹುಮಾನ ವಿತರಣೆ ಮಾಡಲಾಗುತ್ತಿದೆ ಎಂದರು.

ಕಿರುಚಿತ್ರ ಸ್ಪರ್ಧೆ ವಿಜೇತರು

ದಿಲೀಪ್‌ ಕುಮಾರ್‌ ನಿರ್ದೇಶನದ ಪೋಲಾರ್‌(ಪ್ರಥಮ), ಅಭಿಜಿತ್‌ ಪುರೋಹಿತ್‌ ನಿರ್ದೇಶನಕ ಲಕ್ಷ್ಮಿ(ದ್ವಿತೀಯ), ಎಸ್‌.ಪಿ. ಪವನ್‌ ನಿರ್ದೇಶಕನದ ಅನ್ವಾನ್ಟೆಡ್‌ ಕಿಡ್‌(ತೃತೀಯ) ಸ್ಥಾನ ಪಡೆದರೆ. ಸ್ಟ್ಯಾನಿ ಜಾಯ್‌ಸನ್‌ ನಿರ್ದೇಶನದ ತ್ರಿಕಾಲಮ್‌ ಚಿತ್ರಕ್ಕೆ ಉತ್ತಮ ಸಂಕಲನಕಾರ ಹಾಗೂ ಕೃತಾರ್ತ್‌ ಮಂಡೆಕುಟ್ಟಂಡ ನಿರ್ದೇಶನದ ವರ್ತಕಾಲಿ ಚಿತ್ರಕ್ಕೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿತು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಚಲನ ಚಿತ್ರ ನಟರಾದ ಮಂಡ್ಯ ರಮೇಶ್, ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ,ದಸರಾ ಚಲನ ಚಿತ್ರೋತ್ಸವ ಸಮಿತಿಯ ಉಪಾಧ್ಯಕ್ಷರುಗಳಾದ ಕಾಶಿನಾಥ್, ಬೃಂದ ಕೃಷ್ಣೇಗೌಡ, ರಮೇಶ್, ಸಯ್ಯದ್ ಅಬ್ರಹಾಂ, ತೀರ್ಪುಗಾರರಾದ ಪ್ರೊ ಸ್ವಪ್ನಾ, ಸಮಿತಿಯ ಕಾರ್ಯಾಧ್ಯಕ್ಷ ರಂಗೇಗೌಡ, ಸಮಿತಿ ಕಾರ್ಯದರ್ಶಿ ಹರೀಶ್ ಟಿ.ಕೆ ಹಾಗೂ ಸಮಿತಿಯ ಸದಸ್ಯರುಗಳು  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago