ನಮ್ಮ ಮೈಸೂರ ದಸರಾ 2024

ಚಲನ ಚಿತ್ರೋತ್ಸವ ಕಿರು ಚಿತ್ರ ಸ್ಪರ್ಧೆ : ಸಚಿವರಿಂದ ಬಹುಮಾನ ವಿತರಣೆ

ಮೈಸೂರು: ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ ವಿತರಣೆ ಮಾಡಿದರು.

ಮಂಗಳವಾರ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಹಮ್ಮಿಕೊಂಡಿದ್ದ ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಬಹುಮಾನ ವಿತರಿಸಿದರು.

ಬಳಿಕ, ದಸರಾ ಚಲನಚಿತ್ರೋತ್ಸವ ಸಮಿತಿಯ ಉಪ ವಿಶೇಷಾಧಿಕಾರಿಗಳಾದ ಡಾ ಬಸವರಾಜ್ ಕೆ.ಎನ್. ಮಾತನಾಡಿ, ಕಿರು ಚಿತ್ರ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿತ್ತು, 73 ಚಿತ್ರಗಳು ಸ್ಪರ್ಧೆಯಲ್ಲಿ ಭಾಗವಿಸಿದ್ದವು. 4 ಜನರ ತೀರ್ಪುಗಾರರ ತಂಡ ಕಿರು ಚಿತ್ರಗಳನ್ನು ವೀಕ್ಷಿಸಿ ಆಯ್ಕೆ ಮಾಡಿತ್ತು. ಈ ಕಿರುಚಿತ್ರಗಳಿಗೆ ಬಹುಮಾನ ವಿತರಣೆ ಮಾಡಲಾಗುತ್ತಿದೆ ಎಂದರು.

ಕಿರುಚಿತ್ರ ಸ್ಪರ್ಧೆ ವಿಜೇತರು

ದಿಲೀಪ್‌ ಕುಮಾರ್‌ ನಿರ್ದೇಶನದ ಪೋಲಾರ್‌(ಪ್ರಥಮ), ಅಭಿಜಿತ್‌ ಪುರೋಹಿತ್‌ ನಿರ್ದೇಶನಕ ಲಕ್ಷ್ಮಿ(ದ್ವಿತೀಯ), ಎಸ್‌.ಪಿ. ಪವನ್‌ ನಿರ್ದೇಶಕನದ ಅನ್ವಾನ್ಟೆಡ್‌ ಕಿಡ್‌(ತೃತೀಯ) ಸ್ಥಾನ ಪಡೆದರೆ. ಸ್ಟ್ಯಾನಿ ಜಾಯ್‌ಸನ್‌ ನಿರ್ದೇಶನದ ತ್ರಿಕಾಲಮ್‌ ಚಿತ್ರಕ್ಕೆ ಉತ್ತಮ ಸಂಕಲನಕಾರ ಹಾಗೂ ಕೃತಾರ್ತ್‌ ಮಂಡೆಕುಟ್ಟಂಡ ನಿರ್ದೇಶನದ ವರ್ತಕಾಲಿ ಚಿತ್ರಕ್ಕೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿತು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಚಲನ ಚಿತ್ರ ನಟರಾದ ಮಂಡ್ಯ ರಮೇಶ್, ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ,ದಸರಾ ಚಲನ ಚಿತ್ರೋತ್ಸವ ಸಮಿತಿಯ ಉಪಾಧ್ಯಕ್ಷರುಗಳಾದ ಕಾಶಿನಾಥ್, ಬೃಂದ ಕೃಷ್ಣೇಗೌಡ, ರಮೇಶ್, ಸಯ್ಯದ್ ಅಬ್ರಹಾಂ, ತೀರ್ಪುಗಾರರಾದ ಪ್ರೊ ಸ್ವಪ್ನಾ, ಸಮಿತಿಯ ಕಾರ್ಯಾಧ್ಯಕ್ಷ ರಂಗೇಗೌಡ, ಸಮಿತಿ ಕಾರ್ಯದರ್ಶಿ ಹರೀಶ್ ಟಿ.ಕೆ ಹಾಗೂ ಸಮಿತಿಯ ಸದಸ್ಯರುಗಳು  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

13 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

17 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

22 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

27 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

34 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago