ನಮ್ಮ ಮೈಸೂರ ದಸರಾ 2024

ಯೋಗ ಚಾರಣ, ದುರ್ಗಾ ನಮಸ್ಕಾರಕ್ಕೆ ಸಾಕ್ಷಿಯಾದ ಚಾಮುಂಡಿ ಬೆಟ್ಟ

ಮೈಸೂರು: ನಾಡಹಬ್ಬ ಮೈಸೂರು ದಸರಾದ 7ನೇ ದಿನವಾದ ಬುಧವಾರ ಯೋಗ ದಸರಾ ಉಪ ಸಮಿತಿ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ ‘ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ‘ ಕಾರ್ಯಕ್ರಮವನ್ನು ನಡೆಸಲಾಯಿತು.

ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ ಎಂ.ಮಹೇಶ್ ಅವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಯೋಗ ಸರಪಳಿಯಲ್ಲಿ ಯೋಗಪಟುಗಳು, ವಿದ್ಯಾರ್ಥಿಗಳು ಹಾಗೂ ಯುವಕರು, ಹಿರಿಯ, ಸಾರ್ವಜನಿಕರು ಸೇರಿದಂತೆ ಮೈಸೂರಿನ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಬೆಳಗ್ಗೆ 7 ಗಂಟೆಗೆ ಚಾಮುಂಡಿ ಬೆಟ್ಟದ ಆವರಣದಲ್ಲಿ ನೆರೆದಿದ್ದ ಜನರ ದೃಶ್ಯವು ಮೈಸೂರಿನ ಸೊಬಗನ್ನು ಹೆಚ್ಚಿಸಿತು.

ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ಸೇರಿ ವಿವಿಧ ಭಂಗಿಗಳ ಪ್ರದರ್ಶನ
ಯೋಗಪಟುಗಳು ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ, ಸೂರ್ಯ ನಮಸ್ಕಾರ, ವಜ್ರಾಸನ, ಸ್ವಾನಾಸನ, ತ್ರಿಕೋನಾಸನ, ಶವಾಸನ, ಸಿದ್ಧಾಸನ, ಅರ್ಧಚಕ್ರಾಸನ ಸೇರಿದಂತೆ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಮತ್ತು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವು ಯೋಗ ದಸರಾಗೆ ಮತ್ತಷ್ಟು ಮೆರುಗು ತಂದಿತು.

ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್.ಸಮೂಹದ ಮುಖ್ಯಸ್ಥರಾದ ಶ್ರೀಹರಿ, ಯೋಗ ದಸರಾ ಉಪಸಮಿತಿಯ ವಿಶೇಷಾಧಿಕಾರಿಗಳಾದ ಕೆ.ರಮ್ಯ, ಕಾರ್ಯಾಧ್ಯಕ್ಷರಾದ ಅನಂತರಾಜು, ಕಾರ್ಯದರ್ಶಿ ಪುಷ್ಪ , ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ಮತ್ತು ಉಪಾಧ್ಯಕ್ಷರಾದ ರವಿಕುಮಾರ್ ವೈ ಎಸ್.ಸೇರಿದಂತೆ ಇನ್ನಿತರು  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

14 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago