ಮೈಸೂರು: ನಾಡಹಬ್ಬ ಮೈಸೂರು ದಸರಾದ 7ನೇ ದಿನವಾದ ಬುಧವಾರ ಯೋಗ ದಸರಾ ಉಪ ಸಮಿತಿ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ ‘ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ‘ ಕಾರ್ಯಕ್ರಮವನ್ನು ನಡೆಸಲಾಯಿತು.
ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ ಎಂ.ಮಹೇಶ್ ಅವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಯೋಗ ಸರಪಳಿಯಲ್ಲಿ ಯೋಗಪಟುಗಳು, ವಿದ್ಯಾರ್ಥಿಗಳು ಹಾಗೂ ಯುವಕರು, ಹಿರಿಯ, ಸಾರ್ವಜನಿಕರು ಸೇರಿದಂತೆ ಮೈಸೂರಿನ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಬೆಳಗ್ಗೆ 7 ಗಂಟೆಗೆ ಚಾಮುಂಡಿ ಬೆಟ್ಟದ ಆವರಣದಲ್ಲಿ ನೆರೆದಿದ್ದ ಜನರ ದೃಶ್ಯವು ಮೈಸೂರಿನ ಸೊಬಗನ್ನು ಹೆಚ್ಚಿಸಿತು.
ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ಸೇರಿ ವಿವಿಧ ಭಂಗಿಗಳ ಪ್ರದರ್ಶನ
ಯೋಗಪಟುಗಳು ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ, ಸೂರ್ಯ ನಮಸ್ಕಾರ, ವಜ್ರಾಸನ, ಸ್ವಾನಾಸನ, ತ್ರಿಕೋನಾಸನ, ಶವಾಸನ, ಸಿದ್ಧಾಸನ, ಅರ್ಧಚಕ್ರಾಸನ ಸೇರಿದಂತೆ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಮತ್ತು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವು ಯೋಗ ದಸರಾಗೆ ಮತ್ತಷ್ಟು ಮೆರುಗು ತಂದಿತು.
ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್.ಸಮೂಹದ ಮುಖ್ಯಸ್ಥರಾದ ಶ್ರೀಹರಿ, ಯೋಗ ದಸರಾ ಉಪಸಮಿತಿಯ ವಿಶೇಷಾಧಿಕಾರಿಗಳಾದ ಕೆ.ರಮ್ಯ, ಕಾರ್ಯಾಧ್ಯಕ್ಷರಾದ ಅನಂತರಾಜು, ಕಾರ್ಯದರ್ಶಿ ಪುಷ್ಪ , ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ಮತ್ತು ಉಪಾಧ್ಯಕ್ಷರಾದ ರವಿಕುಮಾರ್ ವೈ ಎಸ್.ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…