ನಮ್ಮ ಮೈಸೂರ ದಸರಾ 2024

ಯೋಗ ಚಾರಣ, ದುರ್ಗಾ ನಮಸ್ಕಾರಕ್ಕೆ ಸಾಕ್ಷಿಯಾದ ಚಾಮುಂಡಿ ಬೆಟ್ಟ

ಮೈಸೂರು: ನಾಡಹಬ್ಬ ಮೈಸೂರು ದಸರಾದ 7ನೇ ದಿನವಾದ ಬುಧವಾರ ಯೋಗ ದಸರಾ ಉಪ ಸಮಿತಿ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ ‘ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ‘ ಕಾರ್ಯಕ್ರಮವನ್ನು ನಡೆಸಲಾಯಿತು.

ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ ಎಂ.ಮಹೇಶ್ ಅವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಯೋಗ ಸರಪಳಿಯಲ್ಲಿ ಯೋಗಪಟುಗಳು, ವಿದ್ಯಾರ್ಥಿಗಳು ಹಾಗೂ ಯುವಕರು, ಹಿರಿಯ, ಸಾರ್ವಜನಿಕರು ಸೇರಿದಂತೆ ಮೈಸೂರಿನ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಬೆಳಗ್ಗೆ 7 ಗಂಟೆಗೆ ಚಾಮುಂಡಿ ಬೆಟ್ಟದ ಆವರಣದಲ್ಲಿ ನೆರೆದಿದ್ದ ಜನರ ದೃಶ್ಯವು ಮೈಸೂರಿನ ಸೊಬಗನ್ನು ಹೆಚ್ಚಿಸಿತು.

ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ಸೇರಿ ವಿವಿಧ ಭಂಗಿಗಳ ಪ್ರದರ್ಶನ
ಯೋಗಪಟುಗಳು ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ, ಸೂರ್ಯ ನಮಸ್ಕಾರ, ವಜ್ರಾಸನ, ಸ್ವಾನಾಸನ, ತ್ರಿಕೋನಾಸನ, ಶವಾಸನ, ಸಿದ್ಧಾಸನ, ಅರ್ಧಚಕ್ರಾಸನ ಸೇರಿದಂತೆ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಮತ್ತು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವು ಯೋಗ ದಸರಾಗೆ ಮತ್ತಷ್ಟು ಮೆರುಗು ತಂದಿತು.

ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್.ಸಮೂಹದ ಮುಖ್ಯಸ್ಥರಾದ ಶ್ರೀಹರಿ, ಯೋಗ ದಸರಾ ಉಪಸಮಿತಿಯ ವಿಶೇಷಾಧಿಕಾರಿಗಳಾದ ಕೆ.ರಮ್ಯ, ಕಾರ್ಯಾಧ್ಯಕ್ಷರಾದ ಅನಂತರಾಜು, ಕಾರ್ಯದರ್ಶಿ ಪುಷ್ಪ , ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ಮತ್ತು ಉಪಾಧ್ಯಕ್ಷರಾದ ರವಿಕುಮಾರ್ ವೈ ಎಸ್.ಸೇರಿದಂತೆ ಇನ್ನಿತರು  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

2 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

4 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

5 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

11 hours ago