ನಮ್ಮ ಮೈಸೂರ ದಸರಾ 2024

ಯೋಗ ಚಾರಣ, ದುರ್ಗಾ ನಮಸ್ಕಾರಕ್ಕೆ ಸಾಕ್ಷಿಯಾದ ಚಾಮುಂಡಿ ಬೆಟ್ಟ

ಮೈಸೂರು: ನಾಡಹಬ್ಬ ಮೈಸೂರು ದಸರಾದ 7ನೇ ದಿನವಾದ ಬುಧವಾರ ಯೋಗ ದಸರಾ ಉಪ ಸಮಿತಿ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ ‘ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ‘ ಕಾರ್ಯಕ್ರಮವನ್ನು ನಡೆಸಲಾಯಿತು.

ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ ಎಂ.ಮಹೇಶ್ ಅವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಯೋಗ ಸರಪಳಿಯಲ್ಲಿ ಯೋಗಪಟುಗಳು, ವಿದ್ಯಾರ್ಥಿಗಳು ಹಾಗೂ ಯುವಕರು, ಹಿರಿಯ, ಸಾರ್ವಜನಿಕರು ಸೇರಿದಂತೆ ಮೈಸೂರಿನ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಬೆಳಗ್ಗೆ 7 ಗಂಟೆಗೆ ಚಾಮುಂಡಿ ಬೆಟ್ಟದ ಆವರಣದಲ್ಲಿ ನೆರೆದಿದ್ದ ಜನರ ದೃಶ್ಯವು ಮೈಸೂರಿನ ಸೊಬಗನ್ನು ಹೆಚ್ಚಿಸಿತು.

ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ಸೇರಿ ವಿವಿಧ ಭಂಗಿಗಳ ಪ್ರದರ್ಶನ
ಯೋಗಪಟುಗಳು ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ, ಸೂರ್ಯ ನಮಸ್ಕಾರ, ವಜ್ರಾಸನ, ಸ್ವಾನಾಸನ, ತ್ರಿಕೋನಾಸನ, ಶವಾಸನ, ಸಿದ್ಧಾಸನ, ಅರ್ಧಚಕ್ರಾಸನ ಸೇರಿದಂತೆ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಮತ್ತು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವು ಯೋಗ ದಸರಾಗೆ ಮತ್ತಷ್ಟು ಮೆರುಗು ತಂದಿತು.

ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್.ಸಮೂಹದ ಮುಖ್ಯಸ್ಥರಾದ ಶ್ರೀಹರಿ, ಯೋಗ ದಸರಾ ಉಪಸಮಿತಿಯ ವಿಶೇಷಾಧಿಕಾರಿಗಳಾದ ಕೆ.ರಮ್ಯ, ಕಾರ್ಯಾಧ್ಯಕ್ಷರಾದ ಅನಂತರಾಜು, ಕಾರ್ಯದರ್ಶಿ ಪುಷ್ಪ , ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ಮತ್ತು ಉಪಾಧ್ಯಕ್ಷರಾದ ರವಿಕುಮಾರ್ ವೈ ಎಸ್.ಸೇರಿದಂತೆ ಇನ್ನಿತರು  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago