ನಮ್ಮ ಮೈಸೂರ ದಸರಾ 2024

ʼಚಿಣ್ಣರ ಪ್ರತಿಭೆಗೆʼ ಮಕ್ಕಳ ದಸರಾ ವೇದಿಕೆ: ಸಚಿವ ಮಹದೇವಪ್ಪ ಅಭಿಮತ

ಮೈಸೂರು: ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ದಸರಾ ಮಹೋತ್ಸವದಲ್ಲಿ ಆಯೋಜಿಸಿರುವ ಮಕ್ಕಳ ದಸರಾ ಕಾರ್ಯಕ್ರಮವು ಉತ್ತಮ ವೇದಿಕೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ   ಹೇಳಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಸೋಮವಾರ ಭಾಗವಹಿಸಿ  ಅವರು ಮಾತನಾಡಿದರು.

ಮಕ್ಕಳ ದಸರಾವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಮಕ್ಕಳು ಧರ್ಮ, ಜಾತಿ ಮೀರಿದ ನಿರ್ಮಲ ಮನಸ್ಸುಳ್ಳವರು. ಅವರಲ್ಲಿ ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸಲು ಪೋಷಕರು ನೆರವಾಗಬೇಕು. ಶಿಕ್ಷಕರು ಕೂಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಅವರು ಪ್ರಬುದ್ಧ ನಾಗರಿಕರಾಗಿ ಜೀವಿಸಲು ಅತ್ಯುತ್ತಮ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಮಕ್ಕಳನ್ನು ಅತ್ಯಂತ ಎಚ್ಚರಿಕೆಯಿಂದ ಮುತುವರ್ಜಿವಹಿಸಿ ಬಾಲ್ಯದಲ್ಲಿ ಗುಣಾತ್ಮಕ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ನಡೆವಳಿಕೆಗಳನ್ನು ಕಲಿಸಬೇಕು. ನಮ್ಮ ದೇಶದ ಸಂವಿಧಾನದ ಆಶಯದಂತೆ ಮಕ್ಕಳು ಉತ್ತಮ ಪ್ರಜೆಗಳಾಗಬೇಕು ಎಂದು ಆಶಿಸಿದರು.

ಬಾಲಕ ಅಗಸ್ತ್ಯ ಮಾತನಾಡಿ, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆ ಇದಾಗಿದ್ದು, ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳಿಗೆ ಅಗತ್ಯವಾಗಿದೆ. ಮಕ್ಕಳು ಕೂಡ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ನುಡಿದರು.

ಇದೇ ವೇಳೆ ಕಲಾಮಂದಿರ ಆವರಣದಲ್ಲಿ ತೆರೆಯಲಾಗಿರುವ ಶೈಕ್ಷಣಿಕ ವಸ್ತುಪ್ರದರ್ಶನದ ಮಳಿಗೆಗಳನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಆಡಳಿತಾಧಿಕಾರಿ ಮಂಜುಬುದ್ದಿ, ವಿಭಾಗಧಿಕಾರಿ ರಮೇಶ್, ಡಿಡಿಪಿಐ ಜವರೇಗೌಡ, ಶಿಕ್ಷಣಾಧಿಕಾರಿ ಶೋಭಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago