ನಮ್ಮ ಮೈಸೂರ ದಸರಾ 2024

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಅರಮನೆಯಲ್ಲಿ ಭರದ ಸಿದ್ಧತೆ

 

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದ್ದು. ಇದಕ್ಕಾಗಿ ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 1:41 ರಿಂದ 2:10ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.

ನಂದಿ ಧ್ವಜದ ಹಿಂದೆ ನಿಶಾನೆ ಆನೆ, ಇನ್ನುಳಿದ ಕಲಾತಂಡಗಳು, ಸ್ತಬ್ಧಚಿತ್ರಗಳು ಸಾಗಲಿವೆ. ಕಳೆದ 65 ವರ್ಷಗಳಿಂದ ಗೌರಿಶಂಕರ ನಗರದ ನಂದಿ ಧ್ವಜ, ವೀರಗಾಸೆ ತಂಡದವರು ಈ ಪೂಜೆಯಲ್ಲಿ ಭಾಗಿಯಾಗುತ್ತಿದ್ದಾರೆ. ಉಡಿಗಾಲ ಮಹದೇವಸ್ವಾಮಿ ನೇತೃತ್ವದ ತಂಡದಿಂದ ನಂದಿ ಧ್ವಜ ಕುಣಿತ ನಡೆಯಲಿದೆ.

ಇನ್ನು ಈ ಬಾರಿ ಜಿಲ್ಲಾಡಳಿತ ಅರಮನೆ ಆವರಣದಲ್ಲಿ ಜಂಬೂ ಸವಾರಿ ಮಾರ್ಗ ಬದಲಾವಣೆ ಮಾಡಿದ್ದು, ಹೊಸ ಸಂಪ್ರದಾಯ ಆರಂಭಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಪ್ರತಿ ಬಾರಿ ಅಂಬಾರಿ ಕಟ್ಟಿದ ನಂತರ ಆನೆ ನೇರವಾಗಿ ಪುಷ್ಪಾರ್ಚನೆಗೆ ಬಂದು ನಿಲ್ಲುತ್ತಿತ್ತು. ಆದರೆ ಈ ಬಾರಿ ಪುಷ್ಪಾರ್ಚನೆಗೆ ಮೊದಲೇ ಸುಮಾರು 400 ಮೀಟರ್ ಸಂಚಾರ ಮಾಡುವಂತೆ ಯೋಜನೆ ರೂಪಿಸಲಾಗಿದೆ.

ಅಂಬಾರಿ ಕಟ್ಟಿದ ನಂತರ ಅಭಿಮನ್ಯುವು ತ್ರಿನೇಶ್ವರ ದೇವಸ್ಥಾನ ತಲುಪಿ, ಅಲ್ಲಿಂದ ಶ್ವೇತ ವರಹ ದೇವಸ್ಥಾನ ಬಳಿ ಸಾಗಿ ನಂತರ ಗಣ್ಯರ ಬಳಿ ಬಂದು ನಿಲ್ಲುತ್ತದೆ. ಹೀಗಾಗಿ ಗಣ್ಯರ ಪುಷ್ಪಾರ್ಚನೆಗೆ ಮುನ್ನವೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಂಬಾರಿ ನೋಡುವ ಅವಕಾಶ ಸಿಗುತ್ತದೆ.

ಇನ್ನು ಈಗಾಗಲೇ ರಾಜಬೀದಿಗಳಲ್ಲಿ ಜನರು ಜಂಬೂಸವಾರಿ ಮೆರವಣಿಗೆ ನೋಡಲು ಜಮಾಯಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…

33 mins ago

ಫ್ಲೀಸ್. . ಬಸ್ ನಿಲ್ಲಿಸಿ ಸಾರ್. . !

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…

46 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ಗಾಂಧಿ, ಬುದ್ಧ, ಬಸವ ಅರ್ಜೆಂಟಾಗಿ ಬೇಕು

ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…

56 mins ago

ಸರ್ಕಾರ, ರಾಜ್ಯಪಾಲರ ಸಂಘರ್ಷ ; ನ್ಯಾಯಾಂಗ ಮಧ್ಯಪ್ರವೇಶ ಅಗತ್ಯ

ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…

1 hour ago

ದೇಶದ ಐಕ್ಯತೆ, ಪ್ರಗತಿಯ ಸಂಕೇತ-ಸಂವಿಧಾನ

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…

1 hour ago

ದಿಲ್ಲಿ ಗಣರಾಜ್ಯೋತ್ಸವ | ಚಾ.ನಗರದ ಇಬ್ಬರು ಮಹಿಳೆಯರಿಗೆ ಆಹ್ವಾನ

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…

1 hour ago