ನಮ್ಮ ಮೈಸೂರ ದಸರಾ 2024

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಅರಮನೆಯಲ್ಲಿ ಭರದ ಸಿದ್ಧತೆ

 

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದ್ದು. ಇದಕ್ಕಾಗಿ ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 1:41 ರಿಂದ 2:10ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.

ನಂದಿ ಧ್ವಜದ ಹಿಂದೆ ನಿಶಾನೆ ಆನೆ, ಇನ್ನುಳಿದ ಕಲಾತಂಡಗಳು, ಸ್ತಬ್ಧಚಿತ್ರಗಳು ಸಾಗಲಿವೆ. ಕಳೆದ 65 ವರ್ಷಗಳಿಂದ ಗೌರಿಶಂಕರ ನಗರದ ನಂದಿ ಧ್ವಜ, ವೀರಗಾಸೆ ತಂಡದವರು ಈ ಪೂಜೆಯಲ್ಲಿ ಭಾಗಿಯಾಗುತ್ತಿದ್ದಾರೆ. ಉಡಿಗಾಲ ಮಹದೇವಸ್ವಾಮಿ ನೇತೃತ್ವದ ತಂಡದಿಂದ ನಂದಿ ಧ್ವಜ ಕುಣಿತ ನಡೆಯಲಿದೆ.

ಇನ್ನು ಈ ಬಾರಿ ಜಿಲ್ಲಾಡಳಿತ ಅರಮನೆ ಆವರಣದಲ್ಲಿ ಜಂಬೂ ಸವಾರಿ ಮಾರ್ಗ ಬದಲಾವಣೆ ಮಾಡಿದ್ದು, ಹೊಸ ಸಂಪ್ರದಾಯ ಆರಂಭಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಪ್ರತಿ ಬಾರಿ ಅಂಬಾರಿ ಕಟ್ಟಿದ ನಂತರ ಆನೆ ನೇರವಾಗಿ ಪುಷ್ಪಾರ್ಚನೆಗೆ ಬಂದು ನಿಲ್ಲುತ್ತಿತ್ತು. ಆದರೆ ಈ ಬಾರಿ ಪುಷ್ಪಾರ್ಚನೆಗೆ ಮೊದಲೇ ಸುಮಾರು 400 ಮೀಟರ್ ಸಂಚಾರ ಮಾಡುವಂತೆ ಯೋಜನೆ ರೂಪಿಸಲಾಗಿದೆ.

ಅಂಬಾರಿ ಕಟ್ಟಿದ ನಂತರ ಅಭಿಮನ್ಯುವು ತ್ರಿನೇಶ್ವರ ದೇವಸ್ಥಾನ ತಲುಪಿ, ಅಲ್ಲಿಂದ ಶ್ವೇತ ವರಹ ದೇವಸ್ಥಾನ ಬಳಿ ಸಾಗಿ ನಂತರ ಗಣ್ಯರ ಬಳಿ ಬಂದು ನಿಲ್ಲುತ್ತದೆ. ಹೀಗಾಗಿ ಗಣ್ಯರ ಪುಷ್ಪಾರ್ಚನೆಗೆ ಮುನ್ನವೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಂಬಾರಿ ನೋಡುವ ಅವಕಾಶ ಸಿಗುತ್ತದೆ.

ಇನ್ನು ಈಗಾಗಲೇ ರಾಜಬೀದಿಗಳಲ್ಲಿ ಜನರು ಜಂಬೂಸವಾರಿ ಮೆರವಣಿಗೆ ನೋಡಲು ಜಮಾಯಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

5 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

6 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

6 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

6 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

6 hours ago