ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.
ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದ್ದು. ಇದಕ್ಕಾಗಿ ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಧ್ಯಾಹ್ನ 1:41 ರಿಂದ 2:10ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ನಂದಿ ಧ್ವಜದ ಹಿಂದೆ ನಿಶಾನೆ ಆನೆ, ಇನ್ನುಳಿದ ಕಲಾತಂಡಗಳು, ಸ್ತಬ್ಧಚಿತ್ರಗಳು ಸಾಗಲಿವೆ. ಕಳೆದ 65 ವರ್ಷಗಳಿಂದ ಗೌರಿಶಂಕರ ನಗರದ ನಂದಿ ಧ್ವಜ, ವೀರಗಾಸೆ ತಂಡದವರು ಈ ಪೂಜೆಯಲ್ಲಿ ಭಾಗಿಯಾಗುತ್ತಿದ್ದಾರೆ. ಉಡಿಗಾಲ ಮಹದೇವಸ್ವಾಮಿ ನೇತೃತ್ವದ ತಂಡದಿಂದ ನಂದಿ ಧ್ವಜ ಕುಣಿತ ನಡೆಯಲಿದೆ.
ಇನ್ನು ಈ ಬಾರಿ ಜಿಲ್ಲಾಡಳಿತ ಅರಮನೆ ಆವರಣದಲ್ಲಿ ಜಂಬೂ ಸವಾರಿ ಮಾರ್ಗ ಬದಲಾವಣೆ ಮಾಡಿದ್ದು, ಹೊಸ ಸಂಪ್ರದಾಯ ಆರಂಭಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಪ್ರತಿ ಬಾರಿ ಅಂಬಾರಿ ಕಟ್ಟಿದ ನಂತರ ಆನೆ ನೇರವಾಗಿ ಪುಷ್ಪಾರ್ಚನೆಗೆ ಬಂದು ನಿಲ್ಲುತ್ತಿತ್ತು. ಆದರೆ ಈ ಬಾರಿ ಪುಷ್ಪಾರ್ಚನೆಗೆ ಮೊದಲೇ ಸುಮಾರು 400 ಮೀಟರ್ ಸಂಚಾರ ಮಾಡುವಂತೆ ಯೋಜನೆ ರೂಪಿಸಲಾಗಿದೆ.
ಅಂಬಾರಿ ಕಟ್ಟಿದ ನಂತರ ಅಭಿಮನ್ಯುವು ತ್ರಿನೇಶ್ವರ ದೇವಸ್ಥಾನ ತಲುಪಿ, ಅಲ್ಲಿಂದ ಶ್ವೇತ ವರಹ ದೇವಸ್ಥಾನ ಬಳಿ ಸಾಗಿ ನಂತರ ಗಣ್ಯರ ಬಳಿ ಬಂದು ನಿಲ್ಲುತ್ತದೆ. ಹೀಗಾಗಿ ಗಣ್ಯರ ಪುಷ್ಪಾರ್ಚನೆಗೆ ಮುನ್ನವೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಂಬಾರಿ ನೋಡುವ ಅವಕಾಶ ಸಿಗುತ್ತದೆ.
ಇನ್ನು ಈಗಾಗಲೇ ರಾಜಬೀದಿಗಳಲ್ಲಿ ಜನರು ಜಂಬೂಸವಾರಿ ಮೆರವಣಿಗೆ ನೋಡಲು ಜಮಾಯಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…