ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.
ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದ್ದು. ಇದಕ್ಕಾಗಿ ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಧ್ಯಾಹ್ನ 1:41 ರಿಂದ 2:10ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ನಂದಿ ಧ್ವಜದ ಹಿಂದೆ ನಿಶಾನೆ ಆನೆ, ಇನ್ನುಳಿದ ಕಲಾತಂಡಗಳು, ಸ್ತಬ್ಧಚಿತ್ರಗಳು ಸಾಗಲಿವೆ. ಕಳೆದ 65 ವರ್ಷಗಳಿಂದ ಗೌರಿಶಂಕರ ನಗರದ ನಂದಿ ಧ್ವಜ, ವೀರಗಾಸೆ ತಂಡದವರು ಈ ಪೂಜೆಯಲ್ಲಿ ಭಾಗಿಯಾಗುತ್ತಿದ್ದಾರೆ. ಉಡಿಗಾಲ ಮಹದೇವಸ್ವಾಮಿ ನೇತೃತ್ವದ ತಂಡದಿಂದ ನಂದಿ ಧ್ವಜ ಕುಣಿತ ನಡೆಯಲಿದೆ.
ಇನ್ನು ಈ ಬಾರಿ ಜಿಲ್ಲಾಡಳಿತ ಅರಮನೆ ಆವರಣದಲ್ಲಿ ಜಂಬೂ ಸವಾರಿ ಮಾರ್ಗ ಬದಲಾವಣೆ ಮಾಡಿದ್ದು, ಹೊಸ ಸಂಪ್ರದಾಯ ಆರಂಭಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಪ್ರತಿ ಬಾರಿ ಅಂಬಾರಿ ಕಟ್ಟಿದ ನಂತರ ಆನೆ ನೇರವಾಗಿ ಪುಷ್ಪಾರ್ಚನೆಗೆ ಬಂದು ನಿಲ್ಲುತ್ತಿತ್ತು. ಆದರೆ ಈ ಬಾರಿ ಪುಷ್ಪಾರ್ಚನೆಗೆ ಮೊದಲೇ ಸುಮಾರು 400 ಮೀಟರ್ ಸಂಚಾರ ಮಾಡುವಂತೆ ಯೋಜನೆ ರೂಪಿಸಲಾಗಿದೆ.
ಅಂಬಾರಿ ಕಟ್ಟಿದ ನಂತರ ಅಭಿಮನ್ಯುವು ತ್ರಿನೇಶ್ವರ ದೇವಸ್ಥಾನ ತಲುಪಿ, ಅಲ್ಲಿಂದ ಶ್ವೇತ ವರಹ ದೇವಸ್ಥಾನ ಬಳಿ ಸಾಗಿ ನಂತರ ಗಣ್ಯರ ಬಳಿ ಬಂದು ನಿಲ್ಲುತ್ತದೆ. ಹೀಗಾಗಿ ಗಣ್ಯರ ಪುಷ್ಪಾರ್ಚನೆಗೆ ಮುನ್ನವೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಂಬಾರಿ ನೋಡುವ ಅವಕಾಶ ಸಿಗುತ್ತದೆ.
ಇನ್ನು ಈಗಾಗಲೇ ರಾಜಬೀದಿಗಳಲ್ಲಿ ಜನರು ಜಂಬೂಸವಾರಿ ಮೆರವಣಿಗೆ ನೋಡಲು ಜಮಾಯಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…