ನಮ್ಮ ಮೈಸೂರ ದಸರಾ 2024

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಅರಮನೆಯಲ್ಲಿ ಭರದ ಸಿದ್ಧತೆ

 

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದ್ದು. ಇದಕ್ಕಾಗಿ ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 1:41 ರಿಂದ 2:10ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.

ನಂದಿ ಧ್ವಜದ ಹಿಂದೆ ನಿಶಾನೆ ಆನೆ, ಇನ್ನುಳಿದ ಕಲಾತಂಡಗಳು, ಸ್ತಬ್ಧಚಿತ್ರಗಳು ಸಾಗಲಿವೆ. ಕಳೆದ 65 ವರ್ಷಗಳಿಂದ ಗೌರಿಶಂಕರ ನಗರದ ನಂದಿ ಧ್ವಜ, ವೀರಗಾಸೆ ತಂಡದವರು ಈ ಪೂಜೆಯಲ್ಲಿ ಭಾಗಿಯಾಗುತ್ತಿದ್ದಾರೆ. ಉಡಿಗಾಲ ಮಹದೇವಸ್ವಾಮಿ ನೇತೃತ್ವದ ತಂಡದಿಂದ ನಂದಿ ಧ್ವಜ ಕುಣಿತ ನಡೆಯಲಿದೆ.

ಇನ್ನು ಈ ಬಾರಿ ಜಿಲ್ಲಾಡಳಿತ ಅರಮನೆ ಆವರಣದಲ್ಲಿ ಜಂಬೂ ಸವಾರಿ ಮಾರ್ಗ ಬದಲಾವಣೆ ಮಾಡಿದ್ದು, ಹೊಸ ಸಂಪ್ರದಾಯ ಆರಂಭಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಪ್ರತಿ ಬಾರಿ ಅಂಬಾರಿ ಕಟ್ಟಿದ ನಂತರ ಆನೆ ನೇರವಾಗಿ ಪುಷ್ಪಾರ್ಚನೆಗೆ ಬಂದು ನಿಲ್ಲುತ್ತಿತ್ತು. ಆದರೆ ಈ ಬಾರಿ ಪುಷ್ಪಾರ್ಚನೆಗೆ ಮೊದಲೇ ಸುಮಾರು 400 ಮೀಟರ್ ಸಂಚಾರ ಮಾಡುವಂತೆ ಯೋಜನೆ ರೂಪಿಸಲಾಗಿದೆ.

ಅಂಬಾರಿ ಕಟ್ಟಿದ ನಂತರ ಅಭಿಮನ್ಯುವು ತ್ರಿನೇಶ್ವರ ದೇವಸ್ಥಾನ ತಲುಪಿ, ಅಲ್ಲಿಂದ ಶ್ವೇತ ವರಹ ದೇವಸ್ಥಾನ ಬಳಿ ಸಾಗಿ ನಂತರ ಗಣ್ಯರ ಬಳಿ ಬಂದು ನಿಲ್ಲುತ್ತದೆ. ಹೀಗಾಗಿ ಗಣ್ಯರ ಪುಷ್ಪಾರ್ಚನೆಗೆ ಮುನ್ನವೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಂಬಾರಿ ನೋಡುವ ಅವಕಾಶ ಸಿಗುತ್ತದೆ.

ಇನ್ನು ಈಗಾಗಲೇ ರಾಜಬೀದಿಗಳಲ್ಲಿ ಜನರು ಜಂಬೂಸವಾರಿ ಮೆರವಣಿಗೆ ನೋಡಲು ಜಮಾಯಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

14 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

14 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

14 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

14 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

15 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

15 hours ago