ನಮ್ಮ ಮೈಸೂರ ದಸರಾ 2024

ಯುವ ದಸರಾಗೆ ಕ್ಷಣಗಣನೆ: ಭದ್ರತೆಗೆ 1,239 ಪೊಲೀಸರ ನಿಯೋಜನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳೊಂದಾದ ಯುವ ದಸರಾವು ಇಂದಿನಿಂದ ಶುರುವಾಗಲಿದೆ. ಚಿತ್ರನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜಕುಮಾರ್‌ ಚಾಲನೆ ನೀಡಲಿದ್ದು, ಖ್ಯಾತ ಗಾಯಕಿ ಶ್ರೇಯಾ ಘೋಷಲ್‌ ಗಾನಸುಧೆ ಹರಿಸಲಿದ್ದಾರೆ.

ಇದೇ ಮೊದಲ ಬಾರಿಗೆ ನಗರದ ಹೊರಹೊಲಯ ಉತ್ತನಹಳ್ಳಿ ಬಳಿ ತ್ರಿಪುರಸುಂದರಿ ಜ್ವಾಲಾಮುಖಿ ದೇವಾಲಯ ಸಮೀಪದ ಮೈದಾನದಲ್ಲಿ ನಡೆಯಲಿರುವ ಆರು ದಿನಗಳ ಯುವ ದಸರಾವು, ಯುವಜನತೆಯನ್ನು ಕುಣಿದು ಕುಪ್ಪಳಿಸುವಂತೆ ಮಾಡಲಿದೆ.

ಇಂದು(ಅ.6) ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌ ಅವರ ತಂಡದಿಂದ ಬಾಲಿವುಡ್‌ ನೈಟ್ಸ್‌ ನಡೆಯಲಿದೆ. ಆ.7ರಂದು ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ತಂಡದಿಂದ ರಸಸಂಜೆ ಹಾಗೂ ಸ್ಯಾಂಡಲ್‌ವುಡ್‌ ಕಾರ್ಯಕ್ರಮ, ಅ.8 ರಂದು ಖ್ಯಾತ ರ್ಯಾಪರ್‌ ಬಾದ್‌ ಷಾ ತಂಡದಿಂದ ಸಂಗೀತ ರಸಸಂಜೆ, ಅ.9 ಸಂಗೀತ ನಿರ್ದೇಶಕ ಎ.ಆರ್‌ ರೆಹಮಾನ್‌ ತಂಡದಿಂದ ಸಂಗೀತ ರಸಸಂಜೆ, ಅ.10 ರಂದು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರಿಂದ ಸಂಗೀತ ರಸಸಂಜೆ ನಡೆಯಲಿದೆ.

ಭದ್ರತೆಗೆ 1239 ಪೊಲೀಸರ ನಿಯೋಜನೆ
ಯುವ ದಸರಾ ಭದ್ರತೆಗಾಗಿ 4 ಎಸ್‌.ಪಿ,12ಡಿಎಸ್‌ಪಿ,37ಸಿಪಿಐ,76 ಪಿಎಸ್‌ಐ, 110 ಎಎಸ್‌ಐ, 600ಹೆಡ್‌ಕಾನ್‌ಸ್ಟೆಬಲ್‌,  ಕಾನ್ಸ್ಟೆಬಲ್‌, 100ಮಹಿಳಾ ಪೊಲೀಸ್‌ ಹಾಗೂ 300 ಹೋಂ ಗಾರ್ಡ್‌ ಗಳನ್ನು ನಿಯೋಜಿಸಲಾಗಿದೆ.

ಸಂಚಾರ ದಟ್ಟನೆ ನಿಯಂತ್ರಣಕ್ಕೆ ಇಬ್ಬರು ಇನ್ಸ್‌ಸ್ಪೆಕ್ಟರ್‌, 6 ಸಬ್‌ಇನ್ಸ್‌ಪೆಕ್ಟರ್‌, 10ಎಎಸ್‌ಐ, 50 ಕಾನ್ಸ್‌ಸ್ಟೆಬಲ್‌ಗಳನ್ನು ನೇಮಿಸಲಾಗಿದೆ. ಇದರೊಂದಿಗೆ 6 ಕೆಎಸ್‌ಆರ್‌ಪಿ, 10 ಡಿಎಆರ್‌, 10ಎಎಸ್‌ಸಿ ತಂಡ, 2 ಆಂಬುಲೆನ್ಸ್‌, 2ಅಗ್ನಿಶಾಮಕ ವಾಹಾನ, ಒಂದು ಮೊಬೈಲ್‌ ಕಮಾಂಡೋ ವಾಹನ ಇರಲಿದೆ.

ಜತೆಗೆ ಮಹಿಳೆಯರ ಸುರಕ್ಷತೆಗೂ ವಿಶೇಷ ಒತ್ತು ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಯುವ ದಸರಾಗೆ ಮಳೆ ಅಡ್ಡಿಯಾಗುವ ಆತಂಕ
ನಗರದಲ್ಲಿ ಎರಡು ದಿನಗಳಿಂದ ಸಂಜೆ ವೇಳೆ ಜೋರು ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನೂ ಮೂರು ದಿನಗಳವರೆಗೆ ಮಳೆಯಾಗಲಿದೆ ಎಂಬ ವರದಿ ಇದೆ. ಇದು ಯುವ ದಸರೆಯಲ್ಲಿ ಕುಣಿದು ಕುಪ್ಪಳಿಸಲು ಬರುವವರಲ್ಲಿ ಆತಂಕ ಮೂಡಿಸಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

2 hours ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

2 hours ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

2 hours ago

ನಾ.ದಿವಾಕರ ಅವರ ವಾರದ ಅಂಕಣ: ಎಳೆ ಪ್ರತಿಭೆಗೆ ಸಾಕ್ಷಿಯಾದ ರಂಗ ಪ್ರಯೋಗ

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…

3 hours ago

ಶಂಕರಾಚಾರ್ಯರ ಬಂಧನಕ್ಕೆ ವೇದಿಕೆ ಸಿದ್ಧ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…

3 hours ago

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

3 hours ago