ನಮ್ಮ ಮೈಸೂರ ದಸರಾ 2024

ಯುವ ದಸರಾಗೆ ಕ್ಷಣಗಣನೆ: ಭದ್ರತೆಗೆ 1,239 ಪೊಲೀಸರ ನಿಯೋಜನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳೊಂದಾದ ಯುವ ದಸರಾವು ಇಂದಿನಿಂದ ಶುರುವಾಗಲಿದೆ. ಚಿತ್ರನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜಕುಮಾರ್‌ ಚಾಲನೆ ನೀಡಲಿದ್ದು, ಖ್ಯಾತ ಗಾಯಕಿ ಶ್ರೇಯಾ ಘೋಷಲ್‌ ಗಾನಸುಧೆ ಹರಿಸಲಿದ್ದಾರೆ.

ಇದೇ ಮೊದಲ ಬಾರಿಗೆ ನಗರದ ಹೊರಹೊಲಯ ಉತ್ತನಹಳ್ಳಿ ಬಳಿ ತ್ರಿಪುರಸುಂದರಿ ಜ್ವಾಲಾಮುಖಿ ದೇವಾಲಯ ಸಮೀಪದ ಮೈದಾನದಲ್ಲಿ ನಡೆಯಲಿರುವ ಆರು ದಿನಗಳ ಯುವ ದಸರಾವು, ಯುವಜನತೆಯನ್ನು ಕುಣಿದು ಕುಪ್ಪಳಿಸುವಂತೆ ಮಾಡಲಿದೆ.

ಇಂದು(ಅ.6) ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌ ಅವರ ತಂಡದಿಂದ ಬಾಲಿವುಡ್‌ ನೈಟ್ಸ್‌ ನಡೆಯಲಿದೆ. ಆ.7ರಂದು ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ತಂಡದಿಂದ ರಸಸಂಜೆ ಹಾಗೂ ಸ್ಯಾಂಡಲ್‌ವುಡ್‌ ಕಾರ್ಯಕ್ರಮ, ಅ.8 ರಂದು ಖ್ಯಾತ ರ್ಯಾಪರ್‌ ಬಾದ್‌ ಷಾ ತಂಡದಿಂದ ಸಂಗೀತ ರಸಸಂಜೆ, ಅ.9 ಸಂಗೀತ ನಿರ್ದೇಶಕ ಎ.ಆರ್‌ ರೆಹಮಾನ್‌ ತಂಡದಿಂದ ಸಂಗೀತ ರಸಸಂಜೆ, ಅ.10 ರಂದು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರಿಂದ ಸಂಗೀತ ರಸಸಂಜೆ ನಡೆಯಲಿದೆ.

ಭದ್ರತೆಗೆ 1239 ಪೊಲೀಸರ ನಿಯೋಜನೆ
ಯುವ ದಸರಾ ಭದ್ರತೆಗಾಗಿ 4 ಎಸ್‌.ಪಿ,12ಡಿಎಸ್‌ಪಿ,37ಸಿಪಿಐ,76 ಪಿಎಸ್‌ಐ, 110 ಎಎಸ್‌ಐ, 600ಹೆಡ್‌ಕಾನ್‌ಸ್ಟೆಬಲ್‌,  ಕಾನ್ಸ್ಟೆಬಲ್‌, 100ಮಹಿಳಾ ಪೊಲೀಸ್‌ ಹಾಗೂ 300 ಹೋಂ ಗಾರ್ಡ್‌ ಗಳನ್ನು ನಿಯೋಜಿಸಲಾಗಿದೆ.

ಸಂಚಾರ ದಟ್ಟನೆ ನಿಯಂತ್ರಣಕ್ಕೆ ಇಬ್ಬರು ಇನ್ಸ್‌ಸ್ಪೆಕ್ಟರ್‌, 6 ಸಬ್‌ಇನ್ಸ್‌ಪೆಕ್ಟರ್‌, 10ಎಎಸ್‌ಐ, 50 ಕಾನ್ಸ್‌ಸ್ಟೆಬಲ್‌ಗಳನ್ನು ನೇಮಿಸಲಾಗಿದೆ. ಇದರೊಂದಿಗೆ 6 ಕೆಎಸ್‌ಆರ್‌ಪಿ, 10 ಡಿಎಆರ್‌, 10ಎಎಸ್‌ಸಿ ತಂಡ, 2 ಆಂಬುಲೆನ್ಸ್‌, 2ಅಗ್ನಿಶಾಮಕ ವಾಹಾನ, ಒಂದು ಮೊಬೈಲ್‌ ಕಮಾಂಡೋ ವಾಹನ ಇರಲಿದೆ.

ಜತೆಗೆ ಮಹಿಳೆಯರ ಸುರಕ್ಷತೆಗೂ ವಿಶೇಷ ಒತ್ತು ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಯುವ ದಸರಾಗೆ ಮಳೆ ಅಡ್ಡಿಯಾಗುವ ಆತಂಕ
ನಗರದಲ್ಲಿ ಎರಡು ದಿನಗಳಿಂದ ಸಂಜೆ ವೇಳೆ ಜೋರು ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನೂ ಮೂರು ದಿನಗಳವರೆಗೆ ಮಳೆಯಾಗಲಿದೆ ಎಂಬ ವರದಿ ಇದೆ. ಇದು ಯುವ ದಸರೆಯಲ್ಲಿ ಕುಣಿದು ಕುಪ್ಪಳಿಸಲು ಬರುವವರಲ್ಲಿ ಆತಂಕ ಮೂಡಿಸಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

34 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

39 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

48 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago