ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳೊಂದಾದ ಯುವ ದಸರಾವು ಇಂದಿನಿಂದ ಶುರುವಾಗಲಿದೆ. ಚಿತ್ರನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಚಾಲನೆ ನೀಡಲಿದ್ದು, ಖ್ಯಾತ ಗಾಯಕಿ ಶ್ರೇಯಾ ಘೋಷಲ್ ಗಾನಸುಧೆ ಹರಿಸಲಿದ್ದಾರೆ.
ಇದೇ ಮೊದಲ ಬಾರಿಗೆ ನಗರದ ಹೊರಹೊಲಯ ಉತ್ತನಹಳ್ಳಿ ಬಳಿ ತ್ರಿಪುರಸುಂದರಿ ಜ್ವಾಲಾಮುಖಿ ದೇವಾಲಯ ಸಮೀಪದ ಮೈದಾನದಲ್ಲಿ ನಡೆಯಲಿರುವ ಆರು ದಿನಗಳ ಯುವ ದಸರಾವು, ಯುವಜನತೆಯನ್ನು ಕುಣಿದು ಕುಪ್ಪಳಿಸುವಂತೆ ಮಾಡಲಿದೆ.
ಇಂದು(ಅ.6) ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಅವರ ತಂಡದಿಂದ ಬಾಲಿವುಡ್ ನೈಟ್ಸ್ ನಡೆಯಲಿದೆ. ಆ.7ರಂದು ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ತಂಡದಿಂದ ರಸಸಂಜೆ ಹಾಗೂ ಸ್ಯಾಂಡಲ್ವುಡ್ ಕಾರ್ಯಕ್ರಮ, ಅ.8 ರಂದು ಖ್ಯಾತ ರ್ಯಾಪರ್ ಬಾದ್ ಷಾ ತಂಡದಿಂದ ಸಂಗೀತ ರಸಸಂಜೆ, ಅ.9 ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ತಂಡದಿಂದ ಸಂಗೀತ ರಸಸಂಜೆ, ಅ.10 ರಂದು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರಿಂದ ಸಂಗೀತ ರಸಸಂಜೆ ನಡೆಯಲಿದೆ.
ಭದ್ರತೆಗೆ 1239 ಪೊಲೀಸರ ನಿಯೋಜನೆ
ಯುವ ದಸರಾ ಭದ್ರತೆಗಾಗಿ 4 ಎಸ್.ಪಿ,12ಡಿಎಸ್ಪಿ,37ಸಿಪಿಐ,76 ಪಿಎಸ್ಐ, 110 ಎಎಸ್ಐ, 600ಹೆಡ್ಕಾನ್ಸ್ಟೆಬಲ್, ಕಾನ್ಸ್ಟೆಬಲ್, 100ಮಹಿಳಾ ಪೊಲೀಸ್ ಹಾಗೂ 300 ಹೋಂ ಗಾರ್ಡ್ ಗಳನ್ನು ನಿಯೋಜಿಸಲಾಗಿದೆ.
ಸಂಚಾರ ದಟ್ಟನೆ ನಿಯಂತ್ರಣಕ್ಕೆ ಇಬ್ಬರು ಇನ್ಸ್ಸ್ಪೆಕ್ಟರ್, 6 ಸಬ್ಇನ್ಸ್ಪೆಕ್ಟರ್, 10ಎಎಸ್ಐ, 50 ಕಾನ್ಸ್ಸ್ಟೆಬಲ್ಗಳನ್ನು ನೇಮಿಸಲಾಗಿದೆ. ಇದರೊಂದಿಗೆ 6 ಕೆಎಸ್ಆರ್ಪಿ, 10 ಡಿಎಆರ್, 10ಎಎಸ್ಸಿ ತಂಡ, 2 ಆಂಬುಲೆನ್ಸ್, 2ಅಗ್ನಿಶಾಮಕ ವಾಹಾನ, ಒಂದು ಮೊಬೈಲ್ ಕಮಾಂಡೋ ವಾಹನ ಇರಲಿದೆ.
ಜತೆಗೆ ಮಹಿಳೆಯರ ಸುರಕ್ಷತೆಗೂ ವಿಶೇಷ ಒತ್ತು ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯುವ ದಸರಾಗೆ ಮಳೆ ಅಡ್ಡಿಯಾಗುವ ಆತಂಕ
ನಗರದಲ್ಲಿ ಎರಡು ದಿನಗಳಿಂದ ಸಂಜೆ ವೇಳೆ ಜೋರು ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನೂ ಮೂರು ದಿನಗಳವರೆಗೆ ಮಳೆಯಾಗಲಿದೆ ಎಂಬ ವರದಿ ಇದೆ. ಇದು ಯುವ ದಸರೆಯಲ್ಲಿ ಕುಣಿದು ಕುಪ್ಪಳಿಸಲು ಬರುವವರಲ್ಲಿ ಆತಂಕ ಮೂಡಿಸಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…