ನಮ್ಮ ಮೈಸೂರ ದಸರಾ 2024

ಯುವ ದಸರಾಗೆ ಕ್ಷಣಗಣನೆ: ಭದ್ರತೆಗೆ 1,239 ಪೊಲೀಸರ ನಿಯೋಜನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳೊಂದಾದ ಯುವ ದಸರಾವು ಇಂದಿನಿಂದ ಶುರುವಾಗಲಿದೆ. ಚಿತ್ರನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜಕುಮಾರ್‌ ಚಾಲನೆ ನೀಡಲಿದ್ದು, ಖ್ಯಾತ ಗಾಯಕಿ ಶ್ರೇಯಾ ಘೋಷಲ್‌ ಗಾನಸುಧೆ ಹರಿಸಲಿದ್ದಾರೆ.

ಇದೇ ಮೊದಲ ಬಾರಿಗೆ ನಗರದ ಹೊರಹೊಲಯ ಉತ್ತನಹಳ್ಳಿ ಬಳಿ ತ್ರಿಪುರಸುಂದರಿ ಜ್ವಾಲಾಮುಖಿ ದೇವಾಲಯ ಸಮೀಪದ ಮೈದಾನದಲ್ಲಿ ನಡೆಯಲಿರುವ ಆರು ದಿನಗಳ ಯುವ ದಸರಾವು, ಯುವಜನತೆಯನ್ನು ಕುಣಿದು ಕುಪ್ಪಳಿಸುವಂತೆ ಮಾಡಲಿದೆ.

ಇಂದು(ಅ.6) ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌ ಅವರ ತಂಡದಿಂದ ಬಾಲಿವುಡ್‌ ನೈಟ್ಸ್‌ ನಡೆಯಲಿದೆ. ಆ.7ರಂದು ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ತಂಡದಿಂದ ರಸಸಂಜೆ ಹಾಗೂ ಸ್ಯಾಂಡಲ್‌ವುಡ್‌ ಕಾರ್ಯಕ್ರಮ, ಅ.8 ರಂದು ಖ್ಯಾತ ರ್ಯಾಪರ್‌ ಬಾದ್‌ ಷಾ ತಂಡದಿಂದ ಸಂಗೀತ ರಸಸಂಜೆ, ಅ.9 ಸಂಗೀತ ನಿರ್ದೇಶಕ ಎ.ಆರ್‌ ರೆಹಮಾನ್‌ ತಂಡದಿಂದ ಸಂಗೀತ ರಸಸಂಜೆ, ಅ.10 ರಂದು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರಿಂದ ಸಂಗೀತ ರಸಸಂಜೆ ನಡೆಯಲಿದೆ.

ಭದ್ರತೆಗೆ 1239 ಪೊಲೀಸರ ನಿಯೋಜನೆ
ಯುವ ದಸರಾ ಭದ್ರತೆಗಾಗಿ 4 ಎಸ್‌.ಪಿ,12ಡಿಎಸ್‌ಪಿ,37ಸಿಪಿಐ,76 ಪಿಎಸ್‌ಐ, 110 ಎಎಸ್‌ಐ, 600ಹೆಡ್‌ಕಾನ್‌ಸ್ಟೆಬಲ್‌,  ಕಾನ್ಸ್ಟೆಬಲ್‌, 100ಮಹಿಳಾ ಪೊಲೀಸ್‌ ಹಾಗೂ 300 ಹೋಂ ಗಾರ್ಡ್‌ ಗಳನ್ನು ನಿಯೋಜಿಸಲಾಗಿದೆ.

ಸಂಚಾರ ದಟ್ಟನೆ ನಿಯಂತ್ರಣಕ್ಕೆ ಇಬ್ಬರು ಇನ್ಸ್‌ಸ್ಪೆಕ್ಟರ್‌, 6 ಸಬ್‌ಇನ್ಸ್‌ಪೆಕ್ಟರ್‌, 10ಎಎಸ್‌ಐ, 50 ಕಾನ್ಸ್‌ಸ್ಟೆಬಲ್‌ಗಳನ್ನು ನೇಮಿಸಲಾಗಿದೆ. ಇದರೊಂದಿಗೆ 6 ಕೆಎಸ್‌ಆರ್‌ಪಿ, 10 ಡಿಎಆರ್‌, 10ಎಎಸ್‌ಸಿ ತಂಡ, 2 ಆಂಬುಲೆನ್ಸ್‌, 2ಅಗ್ನಿಶಾಮಕ ವಾಹಾನ, ಒಂದು ಮೊಬೈಲ್‌ ಕಮಾಂಡೋ ವಾಹನ ಇರಲಿದೆ.

ಜತೆಗೆ ಮಹಿಳೆಯರ ಸುರಕ್ಷತೆಗೂ ವಿಶೇಷ ಒತ್ತು ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಯುವ ದಸರಾಗೆ ಮಳೆ ಅಡ್ಡಿಯಾಗುವ ಆತಂಕ
ನಗರದಲ್ಲಿ ಎರಡು ದಿನಗಳಿಂದ ಸಂಜೆ ವೇಳೆ ಜೋರು ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನೂ ಮೂರು ದಿನಗಳವರೆಗೆ ಮಳೆಯಾಗಲಿದೆ ಎಂಬ ವರದಿ ಇದೆ. ಇದು ಯುವ ದಸರೆಯಲ್ಲಿ ಕುಣಿದು ಕುಪ್ಪಳಿಸಲು ಬರುವವರಲ್ಲಿ ಆತಂಕ ಮೂಡಿಸಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

5 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

42 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago