ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಾಳೆ ವಿಜೃಂಭಣೆಯಿಂದ ನಡೆಯಲಿದೆ.
ಈ ಹಿನ್ನೆಲೆಯಲ್ಲಿಂದು ಮೈಸೂರು ನಗರದ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲೀ ದರ್ಗಾಕ್ಕೆ ದಸರಾ ಆನೆಗಳು ಬಂದು ಸಲಾಂ ಮಾಡಿದವು.
ಸೂಫಿ ಸಂತ ಇಮಾಮ್ ಶಾ ವಲೀ ಅವರಿಗೆ ಹಾಗೂ ಚಾಮುಂಡೇಶ್ವರಿ ದೇವಿಗೆ ಜನತೆ ಜಯಕಾರ ಹಾಕಿದರು.
ಕಳೆದ 83 ವರ್ಷಗಳಿಂದಲೂ ವಿಜಯದಶಮಿಯ ಮುನ್ನಾ ದಿನ ಆನೆಗಳು ಇಲ್ಲಿಗೆ ಬರುತ್ತವೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅವಧಿಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಯೊಂದಕ್ಕೆ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿತ್ತು.
ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಆಶೀರ್ವಾದ ಪಡೆದ ನಂತರ ಆನೆಯ ಆರೋಗ್ಯ ಸುಧಾರಿಸಿತು. ಅಂದಿನಿಂದ ಇಂದಿನವರೆಗೂ ದಸರಾ ಆನೆಗಳು ಪ್ರತಿ ದಸರಾದಲ್ಲೂ ದರ್ಗಾಗೆ ಭೇಟಿ ನೀಡುವುದು ವಾಡಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಆನೆಗಳನ್ನು ದರ್ಗಾಗೆ ಕರೆತಂದು, ಧೂಪಾರತಿ ಮಾಡಿದ ನಂತರ ವಿಭೂತಿಯನ್ನು ಹಣೆಗೆ ಹಚ್ಚಲಾಯಿತು. ದರ್ಗಾದ ಚಾದರ ಮೇಲಿಟ್ಟಿದ್ದ ನವಿಲುಗರಿಯಿಂದ ಆಶೀರ್ವಾದವನ್ನು ದರ್ಗಾದ ಮುಖ್ಯಸ್ಥ ಮೊಹಮ್ಮದ್ ನಖೀಬುಲ್ಲಾ ಷಾ ಖಾದ್ರಿ ಮಾಡಿದರು. ಬಳಿಕ ಎಲ್ಲಾ ಆನೆಗಳು ಸೊಂಡಿಲೆತ್ತಿ ದರ್ಗಾಗೆ ನಮಸ್ಕರಿಸಿದವು
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…