ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಾಳೆ ವಿಜೃಂಭಣೆಯಿಂದ ನಡೆಯಲಿದೆ.
ಈ ಹಿನ್ನೆಲೆಯಲ್ಲಿಂದು ಮೈಸೂರು ನಗರದ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲೀ ದರ್ಗಾಕ್ಕೆ ದಸರಾ ಆನೆಗಳು ಬಂದು ಸಲಾಂ ಮಾಡಿದವು.
ಸೂಫಿ ಸಂತ ಇಮಾಮ್ ಶಾ ವಲೀ ಅವರಿಗೆ ಹಾಗೂ ಚಾಮುಂಡೇಶ್ವರಿ ದೇವಿಗೆ ಜನತೆ ಜಯಕಾರ ಹಾಕಿದರು.
ಕಳೆದ 83 ವರ್ಷಗಳಿಂದಲೂ ವಿಜಯದಶಮಿಯ ಮುನ್ನಾ ದಿನ ಆನೆಗಳು ಇಲ್ಲಿಗೆ ಬರುತ್ತವೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅವಧಿಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಯೊಂದಕ್ಕೆ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿತ್ತು.
ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಆಶೀರ್ವಾದ ಪಡೆದ ನಂತರ ಆನೆಯ ಆರೋಗ್ಯ ಸುಧಾರಿಸಿತು. ಅಂದಿನಿಂದ ಇಂದಿನವರೆಗೂ ದಸರಾ ಆನೆಗಳು ಪ್ರತಿ ದಸರಾದಲ್ಲೂ ದರ್ಗಾಗೆ ಭೇಟಿ ನೀಡುವುದು ವಾಡಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಆನೆಗಳನ್ನು ದರ್ಗಾಗೆ ಕರೆತಂದು, ಧೂಪಾರತಿ ಮಾಡಿದ ನಂತರ ವಿಭೂತಿಯನ್ನು ಹಣೆಗೆ ಹಚ್ಚಲಾಯಿತು. ದರ್ಗಾದ ಚಾದರ ಮೇಲಿಟ್ಟಿದ್ದ ನವಿಲುಗರಿಯಿಂದ ಆಶೀರ್ವಾದವನ್ನು ದರ್ಗಾದ ಮುಖ್ಯಸ್ಥ ಮೊಹಮ್ಮದ್ ನಖೀಬುಲ್ಲಾ ಷಾ ಖಾದ್ರಿ ಮಾಡಿದರು. ಬಳಿಕ ಎಲ್ಲಾ ಆನೆಗಳು ಸೊಂಡಿಲೆತ್ತಿ ದರ್ಗಾಗೆ ನಮಸ್ಕರಿಸಿದವು
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…