ನಮ್ಮ ಮೈಸೂರ ದಸರಾ 2024

ಇಮಾಮ್ ಶಾ ವಲೀ ದರ್ಗಾಕ್ಕೆ ಭೇಟಿ ನೀಡಿದ ದಸರಾ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಾಳೆ ವಿಜೃಂಭಣೆಯಿಂದ ನಡೆಯಲಿದೆ.

ಈ ಹಿನ್ನೆಲೆಯಲ್ಲಿಂದು ಮೈಸೂರು ನಗರದ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್‌ ಇಮಾಮ್‌ ಶಾ ವಲೀ ದರ್ಗಾಕ್ಕೆ ದಸರಾ ಆನೆಗಳು ಬಂದು ಸಲಾಂ ಮಾಡಿದವು.

ಸೂಫಿ ಸಂತ ಇಮಾಮ್‌ ಶಾ ವಲೀ ಅವರಿಗೆ ಹಾಗೂ ಚಾಮುಂಡೇಶ್ವರಿ ದೇವಿಗೆ ಜನತೆ ಜಯಕಾರ ಹಾಕಿದರು.

ಕಳೆದ 83 ವರ್ಷಗಳಿಂದಲೂ ವಿಜಯದಶಮಿಯ ಮುನ್ನಾ ದಿನ ಆನೆಗಳು ಇಲ್ಲಿಗೆ ಬರುತ್ತವೆ.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಅವಧಿಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಯೊಂದಕ್ಕೆ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿತ್ತು.

ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಆಶೀರ್ವಾದ ಪಡೆದ ನಂತರ ಆನೆಯ ಆರೋಗ್ಯ ಸುಧಾರಿಸಿತು. ಅಂದಿನಿಂದ ಇಂದಿನವರೆಗೂ ದಸರಾ ಆನೆಗಳು ಪ್ರತಿ ದಸರಾದಲ್ಲೂ ದರ್ಗಾಗೆ ಭೇಟಿ ನೀಡುವುದು ವಾಡಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಆನೆಗಳನ್ನು ದರ್ಗಾಗೆ ಕರೆತಂದು, ಧೂಪಾರತಿ ಮಾಡಿದ ನಂತರ ವಿಭೂತಿಯನ್ನು ಹಣೆಗೆ ಹಚ್ಚಲಾಯಿತು. ದರ್ಗಾದ ಚಾದರ ಮೇಲಿಟ್ಟಿದ್ದ ನವಿಲುಗರಿಯಿಂದ ಆಶೀರ್ವಾದವನ್ನು ದರ್ಗಾದ ಮುಖ್ಯಸ್ಥ ಮೊಹಮ್ಮದ್‌ ನಖೀಬುಲ್ಲಾ ಷಾ ಖಾದ್ರಿ ಮಾಡಿದರು. ಬಳಿಕ ಎಲ್ಲಾ ಆನೆಗಳು ಸೊಂಡಿಲೆತ್ತಿ ದರ್ಗಾಗೆ ನಮಸ್ಕರಿಸಿದವು

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

37 mins ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

39 mins ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

44 mins ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

46 mins ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

50 mins ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

6 hours ago