ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ನಾಡಿಗೆ ಆಗಮಿಸಿ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಜಂಬೂಸವಾರಿಯನ್ನು ಯಶಸ್ವಿಗೊಳಿಸಿ ಇಂದು ಕಾಡಿನತ್ತ ಪಯಣ ಬೆಳೆಸಿದವು.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಇಂದು ನಾಡಿನಿಂದ ಬೀಳ್ಕೊಡುವ ಕಾರ್ಯಕ್ರಮವನ್ನು ಅರಮನೆ ಅಂಗಳದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೊದಲಿಗೆ ದಸರಾ ಗಜಪಡೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಹಣ್ಣು ಹಂಪಲು ಹಾಗೂ ಕಬ್ಬನ್ನು ನೀಡಲಾಯಿತು. ಬಳಿಕ ಆನೆಗಳನ್ನು ಒಂದೊಂದರಂತೆ ಲಾರಿಗೆ ಹತ್ತಿಸಿ ಬೀಳ್ಕೊಡಲಾಯಿತು.
ಅಲ್ಲಿ ನೆರೆದಿದ್ದ ಸಾರ್ವಜನಿಕರು, ಅಭಿಮಾನಿಗಳು, ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿ ದಸರಾ ಗಜಪಡೆಯನ್ನು ಲಾರಿಗೆ ಹತ್ತಿಸಿ ಒಲ್ಲದ ಮನಸ್ಸಿನಿಂದಲೇ ಅವುಗಳನ್ನು ಕಳುಹಿಸಿಕೊಟ್ಟರು. ಈ ವೇಳೆ ಅರಮನೆಯ ಆನೆಗಳು ಸಹ ದಸರಾ ಆನೆಗಳಿಗೆ ಅಪ್ಪುಗೆಯ ಬೀಳ್ಕೊಡುಗೆ ಕೊಟ್ಟಿದ್ದು ವಿಶೇಷವೆನಿಸಿತು.
ಕಾಡಿನಿಂದ ನಾಡಿಗೆ ಬಂದಿದ್ದ ಮಾವುತರು, ಕಾವಾಡಿಗಳ ಮಕ್ಕಳು ಸಹ ಬೇಸರದಿಂದಲೇ ತಮ್ಮ ಬ್ಯಾಗುಗಳನ್ನು ಎತ್ತಿಕೊಂಡು ತಮ್ಮ ತಮ್ಮ ಸ್ವಸ್ಥಾನಕ್ಕೆ ಮರಳಿದರು.
ಈ ವೇಳೆ ಡಿಸಿಎಫ್ ಪ್ರಭುಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…