ಮೈಸೂರು: ದಸರಾ ಹಬ್ಬ ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರದೇ ಇಡೀ ನಾಡೇ ಹಬ್ಬವನ್ನು ಆಚರಣೆ ಮಾಡುತ್ತದೆ ಎಂದು ದಸರಾ ಉದ್ಘಾಟಕರಾದ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಹೇಳಿದ್ದಾರೆ.
ಈ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಿಸಿ ಭಾಷಣ ಮಾಡಿದ ಹಂ.ಪ.ನಾಗರಾಜಯ್ಯ ಅವರು, ಅನೇಕ ಹಬ್ಬಗಳು ಒಂದೆರಡು ದಿನಗಳಿಗೆ ಸೀಮಿತವಾಗಿವೆ. ಆದರೆ ದಸರಾ ಹಲವು ದಿನಗಳ ಕಾಲ ನಡೆಯಲಿದೆ. ಇದು ನಾಡಿನ ಉದ್ದಗಲಕ್ಕೂ ಅನೇಕ ಪ್ರಭಾವ ಬೀರಿದೆ ಎಂದರು.
ಇನ್ನು ಬಾಲ್ಯದಲ್ಲಿ ನೋಡಿದ ದಸರಾ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ತಾಯಿಯ ಜೊತೆ ಬೊಂಬೆ ಖರೀದಿ ಮಾಡಿದ್ದ ಬಗ್ಗೆ ಮಾಹಿತಿ ನೀಡಿದರು.
ಇದು ಅರಮನೆಯ ಹಬ್ಬವಲ್ಲ, ಜನರ ಹಬ್ಬ. ಇದನ್ನು ಸರ್ಕಾರ ಸಂಭ್ರಮದಿಂದ ಆಚರಿಸುತ್ತಿದೆ. ಈ ಆಚರಣೆಯಿಂದ ಕರ್ನಾಟಕದ ಸಾಂಸ್ಕೃತಿಕ ಪಾರಂಪರ್ಯ ಮುಂದಿನ ಪೀಳಿಗೆಗೂ ಪರಿಚಯವಾಗುತ್ತದೆ ಎಂದು ಹೇಳಿದರು.
ಇನ್ನು ಇಸ್ರೇಲ್-ಪ್ಯಾಲೆಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ನಿಂತು ಶಾಂತಿ ನೆಲೆಸಬೇಕು. ಹೆಣ್ಣು ಭ್ರೂಣ ಹತ್ಯೆ ತಡೆಯಲು ಚಾಮುಂಡೇಶ್ವರಿ ದೇವಿ ತಂದೆ-ತಾಯಿಯರಿಗೆ ಸದ್ಬುದ್ಧಿ ಅನುಗ್ರಹಿಸಲಿ ಎಂದು ಬೇಡಿದರು.
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…