ಮೈಸೂರು: ದಸರಾ ಹಬ್ಬ ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರದೇ ಇಡೀ ನಾಡೇ ಹಬ್ಬವನ್ನು ಆಚರಣೆ ಮಾಡುತ್ತದೆ ಎಂದು ದಸರಾ ಉದ್ಘಾಟಕರಾದ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಹೇಳಿದ್ದಾರೆ.
ಈ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಿಸಿ ಭಾಷಣ ಮಾಡಿದ ಹಂ.ಪ.ನಾಗರಾಜಯ್ಯ ಅವರು, ಅನೇಕ ಹಬ್ಬಗಳು ಒಂದೆರಡು ದಿನಗಳಿಗೆ ಸೀಮಿತವಾಗಿವೆ. ಆದರೆ ದಸರಾ ಹಲವು ದಿನಗಳ ಕಾಲ ನಡೆಯಲಿದೆ. ಇದು ನಾಡಿನ ಉದ್ದಗಲಕ್ಕೂ ಅನೇಕ ಪ್ರಭಾವ ಬೀರಿದೆ ಎಂದರು.
ಇನ್ನು ಬಾಲ್ಯದಲ್ಲಿ ನೋಡಿದ ದಸರಾ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ತಾಯಿಯ ಜೊತೆ ಬೊಂಬೆ ಖರೀದಿ ಮಾಡಿದ್ದ ಬಗ್ಗೆ ಮಾಹಿತಿ ನೀಡಿದರು.
ಇದು ಅರಮನೆಯ ಹಬ್ಬವಲ್ಲ, ಜನರ ಹಬ್ಬ. ಇದನ್ನು ಸರ್ಕಾರ ಸಂಭ್ರಮದಿಂದ ಆಚರಿಸುತ್ತಿದೆ. ಈ ಆಚರಣೆಯಿಂದ ಕರ್ನಾಟಕದ ಸಾಂಸ್ಕೃತಿಕ ಪಾರಂಪರ್ಯ ಮುಂದಿನ ಪೀಳಿಗೆಗೂ ಪರಿಚಯವಾಗುತ್ತದೆ ಎಂದು ಹೇಳಿದರು.
ಇನ್ನು ಇಸ್ರೇಲ್-ಪ್ಯಾಲೆಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ನಿಂತು ಶಾಂತಿ ನೆಲೆಸಬೇಕು. ಹೆಣ್ಣು ಭ್ರೂಣ ಹತ್ಯೆ ತಡೆಯಲು ಚಾಮುಂಡೇಶ್ವರಿ ದೇವಿ ತಂದೆ-ತಾಯಿಯರಿಗೆ ಸದ್ಬುದ್ಧಿ ಅನುಗ್ರಹಿಸಲಿ ಎಂದು ಬೇಡಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…