ನಮ್ಮ ಮೈಸೂರ ದಸರಾ 2024

ದಸರಾ ಚಲನಚಿತ್ರೋತ್ಸವ 2024 – ಸಿನಿಮಾ ಸಮಯ ಮ್ಯಾಗಜೀನ್ ಬಿಡುಗಡೆ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಸಂಬಂಧ  ಚಲನಚಿತ್ರೋತ್ಸವ ಉಪ ಸಮಿತಿಯ ವತಿಯಿಂದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಸೋಮವಾರ ಸಿನಿಮಾ ಸಮಯ ದೈನಂದಿನ ಮ್ಯಾಗಜಿನ್ ಬಿಡುಗಡೆಯಾಯಿತು.

ಈ ಸಂದರ್ಭದಲ್ಲಿ ಉಪ ಸಮಿತಿಯ ಉಪ ವಿಶೇಷಾಧಿಕಾರಿಗಳಾದ ಡಾ.ಬಸವರಾಜು ಕೆ.ಎನ್. ಸಮಿತಿಯ ಕಾರ್ಯಾಧ್ಯಕ್ಷರಾದ ರಂಗೇಗೌಡ, ಸಮಿತಿಯ ಕಾರ್ಯದರ್ಶಿ ಹರೀಶ್ ಟಿ.ಕೆ. ಹಾಗೂ ಕಲಾತ್ಮಕ ನಿರ್ದೇಶಕ ಮನು ಹಾಗೂ ಇತರರು ಉಪಸ್ಥಿತರಿದ್ದರು.

ಸಿನಿಮಾ ಸಮಯ- ದಸರ ಚಲನಚಿತ್ರೋತ್ಸವದ ಕೈಗನ್ನಡಿ

ʻಸಿನಿಮಾ ಸಮಯ’ವು ಮೈಸೂರು ದಸರಾ ಚಲನಚಿತ್ರೋತ್ಸವದ ನಿತ್ಯ ಅವತರಣಿಕೆಯಾಗಿದ್ದು,
ಚಿತ್ರೋತ್ಸವದ ದಿನಗಳಲ್ಲಿ ಯಾವೆಲ್ಲಾ ಚಿತ್ರಗಳು ಯಾವ ವಿಭಾಗದಲ್ಲಿ ಪ್ರದರ್ಶನಗೊಂಡಿತ್ತು ಎನ್ನುವುದನ್ನು ತಿಳಿಸುತ್ತದೆ.

ಕನ್ನಡ ಹಾಗೂ ವಿಶ್ವದ ಹಲವು ಭಾಷೆ ಹಾಗೂ ಪ್ರಕಾರಗಳ ಚಲನಚಿತ್ರ ಪ್ರದರ್ಶನ ಮತ್ತು ಅದರ ಬಗ್ಗೆ ಪ್ರೇಕ್ಷಕರ ಅಭಿಪ್ರಾಯ, ಸಿನೆಮಾ ತಂಡದವರಿಂದ ಅಭಿಪ್ರಾಯ ಹೀಗೆ ಅನೇಕ ವಿಚಾರಗಳನ್ನು ಪ್ರಕಟಿಸುತ್ತದೆ. ಚಿತ್ರೋತ್ಸವದಲ್ಲಿ ನಿತ್ಯವೂ ಏನೆಲ್ಲಾ ನಡೆಯುತ್ತದೆ ಎನ್ನುವುದನ್ನು ಪ್ರೇಕ್ಷಕರಿಗೆ ತಿಳಿಸುವುದು ಈ ಮ್ಯಾಗಜೀನ್ ಮೂಲ ಉದ್ದೇಶವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

3 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago