ಮೈಸೂರು: ದಸರಾ ಚಲನಚಿತ್ರೋತ್ಸವ ಸಂಬಂಧ ಇಂದು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ ಹೊರ ಆವರಣದಲ್ಲಿ ” ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನಕ್ಕೆ ಹೆಸರಾಂತ ಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಖ್ಯಾತ ಛಾಯಾಗ್ರಾಹಕರಾದ ಅಶ್ವನಾರಾಯಣ್ ಅವರು ಸೆರೆಹಿಡಿದಿರುವ ಅಪರೂಪದ ಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ.
ಈ ವೇಳೆ ಚಲನಚಿತ್ರೋತ್ಸವ ಅಧಿಕಾರೇತರ ಸಮಿತಿಯ ಅಧ್ಯಕ್ಷ ಪ್ರವೀಣ್ ಕೃಪಾಕರ್, ಚಲನಚಿತ್ರೋತ್ಸವ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಕೆ.ಎನ್.ಬಸವರಾಜ, ಕಾರ್ಯಾಧ್ಯಕ್ಷ ರಂಗೇಗೌಡ, ಕಾರ್ಯದರ್ಶಿ ಹರೀಶ್ ಟಿ.ಕೆ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.