ನಮ್ಮ ಮೈಸೂರ ದಸರಾ 2024

ದಸರಾ ಡ್ರೋನ್ ಶೋ: ಅನಧಿಕೃತ ಡ್ರೋನ್ ವಿಡಿಯೋ ಚಿತ್ರೀಕರಣ ನಿಷೇಧ

ನಿಯಮ ಮೀರಿದರೆ ಕಠಿಣ ಕಾನೂನು ಕ್ರಮಕ್ಕೆ ಸೆಸ್ಕ್ ನಿರ್ಧಾರ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಅ.6 ಮತ್ತು 7ರಂದು ನಡೆದ ಪ್ರದರ್ಶನ ಅಭೂತಪೂರ್ವ ಯಶಸ್ಸಿನೊಂದಿಗೆ ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.

ಆದರೆ ಡ್ರೋನ್ ಪ್ರದರ್ಶನ ನಡೆಯುವ ವೇಳೆ ಕೆಲವು ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಡ್ರೋನ್ ಗಳನ್ನು ಹಾರಿಸಿ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುತ್ತಿರುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುತ್ತಿರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಡ್ರೋನ್‌ಗಳನ್ನು ಹಾರಿಸಿ, ಸೆಸ್ಕ್ ವತಿಯಿಂದ ದಿನಾಂಕ: 11.10.24 ಹಾಗೂ 12.10.24 ರಂದು ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಗಳನ್ನು ಚಿತ್ರೀಕರಿಸುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುವುದು ಕಂಡುಬಂದಲ್ಲಿ ಅವರುಗಳ ವಿರುದ್ಧ ಸೈಬರ್ ಅಪರಾಧಗಳಿಗೆ ಸಂಬಂದಿಸಿದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಲು ಸೆಸ್ಕ್ ‌ನಿರ್ಧರಿಸಿದೆ.

ಈಗಾಗಲೇ ಯಾರೆಲ್ಲಾ ಅನಧಿಕೃತವಾಗಿ ಡ್ರೋನ್ ಪ್ರದರ್ಶನವನ್ನು ಖಾಸಗಿಯಾಗಿ ಡ್ರೋನ್ ಮೂಲಕ ಚಿತ್ರೀಕರಿಸಿದ್ದಾರೆ ಅವರುಗಳ ವಿರುದ್ಧವೂ ಪ್ರಕರಣ ದಾಖಲಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು. ಕೇವಲ ಡ್ರೋನ್ ಪ್ರದರ್ಶನ ಮಾತ್ರವಲ್ಲದೆ ದಸರಾ ಅಂಗವಾಗಿ ಮೈಸೂರು ನಗರದಾದ್ಯಂತ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರದ ದೃಶ್ಯಗಳನ್ನು ಸಹ ಡ್ರೋನ್ ಮೂಲಕ ಅನಧಿಕೃತವಾಗಿ ಚಿತ್ರೀಕರಿಸುವುದು ಕೂಡ ಅಪರಾಧವಾಗಿದೆ. ಹಾಗಾಗಿ, ಯಾವುದೇ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸೆಸ್ಕ್ ವತಿಯಿಂದ ನಡೆಸಲಾಗುತ್ತಿರುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಡ್ರೋನ್ ಗಳ ಮೂಲಕ ಅನಧಿಕೃತ ಚಿತ್ರೀಕರಣ ಮಾಡದಂತೆ ಈ ಮೂಲಕ ಎಚ್ಚರಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

17 mins ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

20 mins ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

22 mins ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

25 mins ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

28 mins ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

32 mins ago