ನಮ್ಮ ಮೈಸೂರ ದಸರಾ 2024

ದಸರಾ ಡ್ರೋನ್ ಶೋ: ಅನಧಿಕೃತ ಡ್ರೋನ್ ವಿಡಿಯೋ ಚಿತ್ರೀಕರಣ ನಿಷೇಧ

ನಿಯಮ ಮೀರಿದರೆ ಕಠಿಣ ಕಾನೂನು ಕ್ರಮಕ್ಕೆ ಸೆಸ್ಕ್ ನಿರ್ಧಾರ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಅ.6 ಮತ್ತು 7ರಂದು ನಡೆದ ಪ್ರದರ್ಶನ ಅಭೂತಪೂರ್ವ ಯಶಸ್ಸಿನೊಂದಿಗೆ ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.

ಆದರೆ ಡ್ರೋನ್ ಪ್ರದರ್ಶನ ನಡೆಯುವ ವೇಳೆ ಕೆಲವು ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಡ್ರೋನ್ ಗಳನ್ನು ಹಾರಿಸಿ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುತ್ತಿರುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುತ್ತಿರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಡ್ರೋನ್‌ಗಳನ್ನು ಹಾರಿಸಿ, ಸೆಸ್ಕ್ ವತಿಯಿಂದ ದಿನಾಂಕ: 11.10.24 ಹಾಗೂ 12.10.24 ರಂದು ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಗಳನ್ನು ಚಿತ್ರೀಕರಿಸುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುವುದು ಕಂಡುಬಂದಲ್ಲಿ ಅವರುಗಳ ವಿರುದ್ಧ ಸೈಬರ್ ಅಪರಾಧಗಳಿಗೆ ಸಂಬಂದಿಸಿದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಲು ಸೆಸ್ಕ್ ‌ನಿರ್ಧರಿಸಿದೆ.

ಈಗಾಗಲೇ ಯಾರೆಲ್ಲಾ ಅನಧಿಕೃತವಾಗಿ ಡ್ರೋನ್ ಪ್ರದರ್ಶನವನ್ನು ಖಾಸಗಿಯಾಗಿ ಡ್ರೋನ್ ಮೂಲಕ ಚಿತ್ರೀಕರಿಸಿದ್ದಾರೆ ಅವರುಗಳ ವಿರುದ್ಧವೂ ಪ್ರಕರಣ ದಾಖಲಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು. ಕೇವಲ ಡ್ರೋನ್ ಪ್ರದರ್ಶನ ಮಾತ್ರವಲ್ಲದೆ ದಸರಾ ಅಂಗವಾಗಿ ಮೈಸೂರು ನಗರದಾದ್ಯಂತ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರದ ದೃಶ್ಯಗಳನ್ನು ಸಹ ಡ್ರೋನ್ ಮೂಲಕ ಅನಧಿಕೃತವಾಗಿ ಚಿತ್ರೀಕರಿಸುವುದು ಕೂಡ ಅಪರಾಧವಾಗಿದೆ. ಹಾಗಾಗಿ, ಯಾವುದೇ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸೆಸ್ಕ್ ವತಿಯಿಂದ ನಡೆಸಲಾಗುತ್ತಿರುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಡ್ರೋನ್ ಗಳ ಮೂಲಕ ಅನಧಿಕೃತ ಚಿತ್ರೀಕರಣ ಮಾಡದಂತೆ ಈ ಮೂಲಕ ಎಚ್ಚರಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago