ನಮ್ಮ ಮೈಸೂರ ದಸರಾ 2024

ದಸರಾ ಡ್ರೋನ್ ಶೋ: ಅನಧಿಕೃತ ಡ್ರೋನ್ ವಿಡಿಯೋ ಚಿತ್ರೀಕರಣ ನಿಷೇಧ

ನಿಯಮ ಮೀರಿದರೆ ಕಠಿಣ ಕಾನೂನು ಕ್ರಮಕ್ಕೆ ಸೆಸ್ಕ್ ನಿರ್ಧಾರ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಅ.6 ಮತ್ತು 7ರಂದು ನಡೆದ ಪ್ರದರ್ಶನ ಅಭೂತಪೂರ್ವ ಯಶಸ್ಸಿನೊಂದಿಗೆ ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.

ಆದರೆ ಡ್ರೋನ್ ಪ್ರದರ್ಶನ ನಡೆಯುವ ವೇಳೆ ಕೆಲವು ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಡ್ರೋನ್ ಗಳನ್ನು ಹಾರಿಸಿ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುತ್ತಿರುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುತ್ತಿರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಡ್ರೋನ್‌ಗಳನ್ನು ಹಾರಿಸಿ, ಸೆಸ್ಕ್ ವತಿಯಿಂದ ದಿನಾಂಕ: 11.10.24 ಹಾಗೂ 12.10.24 ರಂದು ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಗಳನ್ನು ಚಿತ್ರೀಕರಿಸುವುದು ಹಾಗೂ ಡ್ರೋನ್ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಯಬಿಡುವುದು ಕಂಡುಬಂದಲ್ಲಿ ಅವರುಗಳ ವಿರುದ್ಧ ಸೈಬರ್ ಅಪರಾಧಗಳಿಗೆ ಸಂಬಂದಿಸಿದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಲು ಸೆಸ್ಕ್ ‌ನಿರ್ಧರಿಸಿದೆ.

ಈಗಾಗಲೇ ಯಾರೆಲ್ಲಾ ಅನಧಿಕೃತವಾಗಿ ಡ್ರೋನ್ ಪ್ರದರ್ಶನವನ್ನು ಖಾಸಗಿಯಾಗಿ ಡ್ರೋನ್ ಮೂಲಕ ಚಿತ್ರೀಕರಿಸಿದ್ದಾರೆ ಅವರುಗಳ ವಿರುದ್ಧವೂ ಪ್ರಕರಣ ದಾಖಲಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು. ಕೇವಲ ಡ್ರೋನ್ ಪ್ರದರ್ಶನ ಮಾತ್ರವಲ್ಲದೆ ದಸರಾ ಅಂಗವಾಗಿ ಮೈಸೂರು ನಗರದಾದ್ಯಂತ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರದ ದೃಶ್ಯಗಳನ್ನು ಸಹ ಡ್ರೋನ್ ಮೂಲಕ ಅನಧಿಕೃತವಾಗಿ ಚಿತ್ರೀಕರಿಸುವುದು ಕೂಡ ಅಪರಾಧವಾಗಿದೆ. ಹಾಗಾಗಿ, ಯಾವುದೇ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸೆಸ್ಕ್ ವತಿಯಿಂದ ನಡೆಸಲಾಗುತ್ತಿರುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಡ್ರೋನ್ ಗಳ ಮೂಲಕ ಅನಧಿಕೃತ ಚಿತ್ರೀಕರಣ ಮಾಡದಂತೆ ಈ ಮೂಲಕ ಎಚ್ಚರಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago