ನಮ್ಮ ಮೈಸೂರ ದಸರಾ 2024

ಜಂಬೂಸವಾರಿ ಮೆರವಣಿಗೆ: ʻಸತ್ತಿಗೆ ಕುಣಿತʼ ಕಲಾತಂಡಕ್ಕೆ ಪ್ರಥಮ ಬಹುಮಾನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿ, ಪ್ರದರ್ಶನ ನೀಡಿದ ಉತ್ತಮ ಕಲಾ ತಂಡಗಳಿಗೆ ಬಹುಮಾನ ಘೋಷಿಸಲಾಗಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದರಾಪುದ ಸಂಜೀತ ಸಿ.ಕೋತ ನೇತೃತ್ವದ ರೇವಣ್ಣಸಿದ್ದೇಶ್ವರ ಯುವಕರ ಕಲಾಸಂಘದ ಸತ್ತಿಗೆ ಕುಣಿತಕ್ಕೆ ಪ್ರಥಮ ಬಹುಮಾನ ದೊರೆತಿದೆ. ಈ ಬಹುಮಾನವು 15ಸಾವಿರವನ್ನು ಒಳಗೊಂಡಿದೆ.

ಯಾದಗಿರಿಯ ವಿಶ್ವಾಸಪುರ ತಾಂಡಾದ ಮನೋಹರ ಖೇಮು ಪವಾರ ನೇತೃತ್ವದ ಲಂಬಾಣಿ ನೃತ್ಯ ಕಲಾತಂಡ, ಮಂಡ್ಯ ಜಿಲ್ಲೆಯ ಮದ್ದೂರಿನ ಕ್ಯಾತಘಟ್ಟದ ಕೀರ್ತಿನಿ ಮತ್ತು ಪ್ರಮೋದಿನಿ ನೇತೃತ್ವದ ಪೂಜಾಕುಣಿತ ಕಲಾವಿದರ ತಂಡ, ಮದ್ದೂರಿನ ಚಿಕ್ಕರಸಿನಕೆರೆಯ ಕಾಲಭೈರವೇಶ್ವರ ಯುವಕರ ತಂಡಗಳು ದ್ವಿತೀಯ ಸ್ಥಾನ ಪಡೆದು ತಲಾ 5 ಸಾವಿರು ನಗದು ಬಹುಮಾನ ಗಳಿಸಿದೆ.

ಹಾವೇರಿ ಜಿಲ್ಲೆಯ ವೀರಭದ್ರೇಶ್ವರ ಪುರವಂತಿಕೆ ಕಲಾತಂಡ ಹಾಗೂ ಕೋಲಾರ ಜಿಲ್ಲೆಯ ಸುಳದೇನಹಳ್ಳಿಯ ಮಾರುತಿ ಕಲಾವಿದರ ಸಂಘದ ಗಾರುಡಿ ಗೊಂಬೆ ತೃತೀಯ ಬಹುಮಾನ ಪಡೆದು, ತಲಾ 2.500 ಪಡೆದಿವೆ ಎಂದು ದಸರಾ ಮೆರವಣಿಗೆ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಸೀಮಾ ಲಾಟ್ಕಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳೆ ಕೊರತೆ, ಬಿಸಿಲಿಗೆ ಕಬಿನಿ ನೀರಿನ ಮಟ್ಟ ಕುಸಿತ

ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…

24 seconds ago

ಇಂದಿನಿಂದ ಮೂರು ದಿನ ಸಿಇಟಿ ಪರೀಕ್ಷೆ

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…

20 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 22 ಬುಧವಾರ

45 mins ago

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

12 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

12 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

13 hours ago